<p><strong>ಪೀಣ್ಯ ದಾಸರಹಳ್ಳಿ:</strong> ‘ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಾನೇ’ ಎಂದು ಪ್ರಚಾರ ಹಮ್ಮಿಕೊಂಡಿದ್ದ ಜಿ. ಧನಂಜಯ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಇತರೆ ಅಭ್ಯರ್ಥಿಗಳು ಬುಧವಾರ ಅಡ್ಡಿಪಡಿಸಿದ್ದಾರೆ.</p>.<p>ಕ್ಷೇತ್ರದ ಇತರೆ ಟಿಕೆಟ್ ಆಕಾಂಕ್ಷಿಗಳಾದ ಕೆ.ಸಿ. ಅಶೋಕ್, ಕೆ. ನಾಗಭೂಷಣ್ ಹಾಗೂ ಗೀತಾ ಶಿವರಾಮ್ ಅವರು ತಮ್ಮ ಬೆಂಬಲಿಗರೊಂದಿಗೆ ಬಂದು, ಹೈಕಮಾಂಡ್ ಅಧಿಕೃತ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಆದ್ದರಿಂದ ಚುನಾವಣಾ ಪ್ರಚಾರ ಕೈಗೊಳ್ಳಬಾರದು ಎಂದು ಗೋ ಬ್ಯಾಕ್ ಧನಂಜಯ್ ಎಂದು ಕೂಗುತ್ತಾ ಪ್ರಚಾರ ಕಾರ್ಯಕ್ಕೆ ಅಡ್ಡಿಪಡಿಸಿದರು. ಗಂಗಮ್ಮನ ಗುಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.</p>.<p>ಈ ವೇಳೆ ಮಾತನಾಡಿದ ಜಿ ಧನಂಜಯ್, 'ನಾನು ಕ್ಷೇತ್ರದ ಶಾಸಕರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇನೆ.<br />ಆದರೆ, ಇಷ್ಟು ವರ್ಷಗಳಿಂದ ಕಾಂಗ್ರೆಸ್ನಲ್ಲಿರುವ ಇವರು ಯಾಕೆ ಶಾಸಕರ ವಿರುದ್ಧ ಮಾತನಾಡುತ್ತಿಲ್ಲ. ಇವರು ಯಾರೂ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಜೆಡಿಎಸ್ ಪಕ್ಷದವರಿಂದ ₹15 ಕೋಟಿ ಪಡೆದು ಕಾಂಗ್ರೆಸ್ ಪಕ್ಷ ಸೋಲಿಸಲು ಕೆಲ ಶಕುನಿಗಳು ತೊಂದರೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಅವರು ಹಣ ಪಡೆದಿಲ್ಲ ಎಂದಾದರೆ ಆಂಜನೇಯನ ಮೇಲೆ ಆಣೆ ಮಾಡಲಿ. ಇದು ಸುಳ್ಳು ಎಂದಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಾನೇ’ ಎಂದು ಪ್ರಚಾರ ಹಮ್ಮಿಕೊಂಡಿದ್ದ ಜಿ. ಧನಂಜಯ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಇತರೆ ಅಭ್ಯರ್ಥಿಗಳು ಬುಧವಾರ ಅಡ್ಡಿಪಡಿಸಿದ್ದಾರೆ.</p>.<p>ಕ್ಷೇತ್ರದ ಇತರೆ ಟಿಕೆಟ್ ಆಕಾಂಕ್ಷಿಗಳಾದ ಕೆ.ಸಿ. ಅಶೋಕ್, ಕೆ. ನಾಗಭೂಷಣ್ ಹಾಗೂ ಗೀತಾ ಶಿವರಾಮ್ ಅವರು ತಮ್ಮ ಬೆಂಬಲಿಗರೊಂದಿಗೆ ಬಂದು, ಹೈಕಮಾಂಡ್ ಅಧಿಕೃತ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಆದ್ದರಿಂದ ಚುನಾವಣಾ ಪ್ರಚಾರ ಕೈಗೊಳ್ಳಬಾರದು ಎಂದು ಗೋ ಬ್ಯಾಕ್ ಧನಂಜಯ್ ಎಂದು ಕೂಗುತ್ತಾ ಪ್ರಚಾರ ಕಾರ್ಯಕ್ಕೆ ಅಡ್ಡಿಪಡಿಸಿದರು. ಗಂಗಮ್ಮನ ಗುಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.</p>.<p>ಈ ವೇಳೆ ಮಾತನಾಡಿದ ಜಿ ಧನಂಜಯ್, 'ನಾನು ಕ್ಷೇತ್ರದ ಶಾಸಕರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇನೆ.<br />ಆದರೆ, ಇಷ್ಟು ವರ್ಷಗಳಿಂದ ಕಾಂಗ್ರೆಸ್ನಲ್ಲಿರುವ ಇವರು ಯಾಕೆ ಶಾಸಕರ ವಿರುದ್ಧ ಮಾತನಾಡುತ್ತಿಲ್ಲ. ಇವರು ಯಾರೂ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಜೆಡಿಎಸ್ ಪಕ್ಷದವರಿಂದ ₹15 ಕೋಟಿ ಪಡೆದು ಕಾಂಗ್ರೆಸ್ ಪಕ್ಷ ಸೋಲಿಸಲು ಕೆಲ ಶಕುನಿಗಳು ತೊಂದರೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಅವರು ಹಣ ಪಡೆದಿಲ್ಲ ಎಂದಾದರೆ ಆಂಜನೇಯನ ಮೇಲೆ ಆಣೆ ಮಾಡಲಿ. ಇದು ಸುಳ್ಳು ಎಂದಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>