ಬೆಂಗಳೂರು: ಬಿಜೆಪಿಯ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರು ತೇಜಸ್ವಿನಿ ಅನಂತಕುಮಾರ್ ಅವರ ಮನೆಗೆ ಗುರುವಾರ ಭೇಟಿ ನೀಡಿ ಮನವೊಲಿಸಲು ಯತ್ನಿಸಿದರು. ಈ ವೇಳೆ, ಕೇಂದ್ರ ನಾಯಕರ ಧೋರಣೆ ಖಂಡಿಸಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಿಂದಿನ ಕಹಿ ಘಟನೆ ಮರೆತು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಮುರಳೀಧರ ರಾವ್ ಮನವಿ ಮಾಡಿದರು.
ಈ ವೇಳೆ, ತೇಜಸ್ವಿನಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಟಿಕೆಟ್ ತಪ್ಪಿಸಿದ್ದು ಏಕೆ ಎಂದು ಮೊದಲು ಸ್ಪಷ್ಟಪಡಿಸಿ ಎಂದು ಖಾರವಾಗಿ ನುಡಿದರು.ಮಾತುಕತೆ ಮುಗಿಸಿ ಮುರಳೀಧರ ರಾವ್ ಹೊರಬಂದಾಗ ಕಾರ್ಯಕರ್ತರು ಅಡ್ಡಗಟ್ಟಿ ಘೋಷಣೆ ಕೂಗಿದರು. ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಅನಂತಕುಮಾರ್ ಸಹೋದರ ನಂದಕುಮಾರ್ ಕಾರ್ಯಕರ್ತರನ್ನು ಸಮಾಧಾನಪಡಿಸಿ ಮುರಳೀಧರ ರಾವ್ ಅವರು ತೆರಳಲು ಅನುವು ಮಾಡಿಕೊಟ್ಟರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.