<p><strong>ಬೆಂಗಳೂರು:</strong> ಟಿಕ್ಟಾಕ್ ಮೊಬೈಲ್ ಆ್ಯಪ್ನಲ್ಲಿ ಪರಿಚಯವಾಗಿ ಮದುವೆ ಆಗುವುದಾಗಿ ಹೇಳಿ ₹4 ಲಕ್ಷ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿ ವಿಜಯಲಕ್ಷ್ಮಿ ಎಂಬುವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.</p>.<p>ವಕೀಲರ ಸಮೇತ ಡಿ.ಜೆ.ಹಳ್ಳಿ ಠಾಣೆಗೆ ಮಂಗಳವಾರ ಹಾಜರಾದ ವಿಜಯಲಕ್ಷ್ಮಿ, ಪ್ರಕರಣ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿದರು.</p>.<p>‘ವಿಜಯಲಕ್ಷ್ಮಿ ಟಿಕ್ಟಾಕ್ನಲ್ಲಿ ವಿಡಿಯೊ ಹಾಕುತ್ತಿದ್ದರು. ಅದನ್ನು ಮೆಚ್ಚಿ ಸಂದೇಶ ಕಳುಹಿಸಿದ್ದೆ. ನಮ್ಮಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಮದುವೆ ಆಗುವುದಾಗಿ ಹೇಳಿದ್ದ ಅವರು ₹ 4 ಲಕ್ಷ ಪಡೆದಿದ್ದರು. ಮದುವೆಯಾಗಲು ನಿರಾಕರಿಸುತ್ತಿರುವ ಅವರು ಹಣವನ್ನು ವಾಪಸು ಕೊಡುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಶಿವಕುಮಾರ್ ಎಂಬುವರು ದೂರು ನೀಡಿದ್ದರು. ಅದರನ್ವಯ ಮಹಿಳೆ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಪ್ರಕರಣ ದಾಖಲಾದಾಗಿನಿಂದ ಮಹಿಳೆ ತಲೆಮರೆಸಿಕೊಂಡಿದ್ದರು. ಈಗ ಜಾಮೀನು ಪಡೆದಿರುವ ಅವರು ಠಾಣೆಗೆ ಬಂದು ಹೇಳಿಕೆ ನೀಡಿ ಹೋಗಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಟಿಕ್ಟಾಕ್ ಮೊಬೈಲ್ ಆ್ಯಪ್ನಲ್ಲಿ ಪರಿಚಯವಾಗಿ ಮದುವೆ ಆಗುವುದಾಗಿ ಹೇಳಿ ₹4 ಲಕ್ಷ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿ ವಿಜಯಲಕ್ಷ್ಮಿ ಎಂಬುವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.</p>.<p>ವಕೀಲರ ಸಮೇತ ಡಿ.ಜೆ.ಹಳ್ಳಿ ಠಾಣೆಗೆ ಮಂಗಳವಾರ ಹಾಜರಾದ ವಿಜಯಲಕ್ಷ್ಮಿ, ಪ್ರಕರಣ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿದರು.</p>.<p>‘ವಿಜಯಲಕ್ಷ್ಮಿ ಟಿಕ್ಟಾಕ್ನಲ್ಲಿ ವಿಡಿಯೊ ಹಾಕುತ್ತಿದ್ದರು. ಅದನ್ನು ಮೆಚ್ಚಿ ಸಂದೇಶ ಕಳುಹಿಸಿದ್ದೆ. ನಮ್ಮಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಮದುವೆ ಆಗುವುದಾಗಿ ಹೇಳಿದ್ದ ಅವರು ₹ 4 ಲಕ್ಷ ಪಡೆದಿದ್ದರು. ಮದುವೆಯಾಗಲು ನಿರಾಕರಿಸುತ್ತಿರುವ ಅವರು ಹಣವನ್ನು ವಾಪಸು ಕೊಡುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಶಿವಕುಮಾರ್ ಎಂಬುವರು ದೂರು ನೀಡಿದ್ದರು. ಅದರನ್ವಯ ಮಹಿಳೆ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಪ್ರಕರಣ ದಾಖಲಾದಾಗಿನಿಂದ ಮಹಿಳೆ ತಲೆಮರೆಸಿಕೊಂಡಿದ್ದರು. ಈಗ ಜಾಮೀನು ಪಡೆದಿರುವ ಅವರು ಠಾಣೆಗೆ ಬಂದು ಹೇಳಿಕೆ ನೀಡಿ ಹೋಗಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>