‘ವಿಜಯಲಕ್ಷ್ಮಿ ಟಿಕ್ಟಾಕ್ನಲ್ಲಿ ವಿಡಿಯೊ ಹಾಕುತ್ತಿದ್ದರು. ಅದನ್ನು ಮೆಚ್ಚಿ ಸಂದೇಶ ಕಳುಹಿಸಿದ್ದೆ. ನಮ್ಮಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಮದುವೆ ಆಗುವುದಾಗಿ ಹೇಳಿದ್ದ ಅವರು ₹ 4 ಲಕ್ಷ ಪಡೆದಿದ್ದರು. ಮದುವೆಯಾಗಲು ನಿರಾಕರಿಸುತ್ತಿರುವ ಅವರು ಹಣವನ್ನು ವಾಪಸು ಕೊಡುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಶಿವಕುಮಾರ್ ಎಂಬುವರು ದೂರು ನೀಡಿದ್ದರು. ಅದರನ್ವಯ ಮಹಿಳೆ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.