ಪ್ರತಿ ವರ್ಷ ನವೆಂಬರ್ 3ರಿಂದ 5ರವರೆಗೆ ಉತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ನ.3ರಂದೇ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ಇದ್ದಿದ್ದರಿಂದ ಉತ್ಸವವನ್ನು ಮುಂದೂಡಲಾಗಿತ್ತು. ಆ ನಂತರಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ ಅವರು ‘ಜಿಲ್ಲೆಯ ಏಳು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವಾಗ ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ನಂತರ ಸರ್ಕಾರದ ಮಟ್ಟದಲ್ಲಿಯೂ ಚರ್ಚಿಸಿ, ತೀರ್ಮಾನಕ್ಕೆ ಬರಲಾಗುವುದು’ ಎಂದು ಹೇಳಿದ್ದರು.