ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಚ್. ಮಂಚೇಗೌಡ, ‘ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಪ್ರಣವಾನಂದ ಸ್ವಾಮೀಜಿ 70 ಲಕ್ಷ ಈಡಿಗರನ್ನು ಪ್ರತಿನಿಧಿಸುತ್ತಾರೆ. ಆದರೆ, ಕರ್ನಾಟಕ ಪ್ರದೇಶ ಈಡಿಗರ ಸಂಘ ಕೇವಲ 12 ಸಾವಿರ ಜನರನ್ನು ಪ್ರತಿನಿಧಿಸುತ್ತದೆ. ಆದ್ದರಿಂದ, ಸ್ವಾಮೀಜಿ ಅವರ ವಿರುದ್ಧ ನೀಡಿರುವ ಹೇಳಿಕೆಯನ್ನು ಕೂಡಲೇ ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸಂಘದ ವಿರುದ್ಧ ಕಾನೂನು ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.