<p><strong>ಬೆಂಗಳೂರು: </strong>ಕೆ.ಆರ್.ಪುರ ಬಳಿಯ ಪೈ ಬಡಾವಣೆ ಮತ್ತು ಟಿನ್ಫ್ಯಾಕ್ಟರಿ ಜಂಕ್ಷನ್ ಬಳಿಯ ಮೇಲ್ಸೇತುವೆಯ ಕೆಳಭಾಗದಲ್ಲಿ ನೀರು ಕಟ್ಟಿಕೊಳ್ಳುವ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ.</p>.<p>ಇಲ್ಲಿನ 80 ಮೀಟರ್ ಉದ್ದದ ಮೂರು ಕೊಳವೆಗಳಲ್ಲಿ ಹೂಳು ತುಂಬಿಕೊಂಡಿದ್ದ ಪರಿಣಾಮ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ಪ್ರದೇಶ ಜಲಾವೃತಗೊಳ್ಳುತ್ತಿತ್ತು. ಸುಮಾರು 8 ವರ್ಷಗಳಿಂದಲೂ ಈ ಸಮಸ್ಯೆ ಇತ್ತು. ತಿಂಗಳ ಹಿಂದೆ ಸುರಿದ ಮಳೆಗೆ ಈ ಪ್ರದೇಶದಲ್ಲಿ ನೀರು ತುಂಬಿ ಸುಮಾರು ನಾಲ್ಕೈದು ಅಡಿಗಳಷ್ಟು ನೀರು ರಸ್ತೆ ಮೇಲೆ ನಿಂತಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸುವಂತೆ ಮೇಯರ್ ಎಂ.ಗೌತಮ್ ಕುಮಾರ್ ಸೂಚಿಸಿದ್ದರು.</p>.<p>ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮೂರೂ ಕೊಳವೆಗಳಲ್ಲಿನ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಬಳಿಕ ಯಾವುದೇ ಅಡೆ ತಡೆ ಇಲ್ಲದೆಯೇ ನೀರು ಸರಾಗವಾಗಿ ಹರಿಯುತ್ತಿದೆ. ಈ ಪ್ರದೇಶವು ಈ ಬಾರಿ ಮಳೆಗೆ ಜಲಾವೃತವಾಗಿಲ್ಲ.</p>.<p>ಈ ಸ್ಥಳಕ್ಕೆ ಮೇಯರ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರನ್ನು ಅನೇಕ ವರ್ಷಗಳಿಂದ ಕಾಡುತ್ತಿದ್ದ ಸಮಸ್ಯೆ ಬಗೆಹರಿಸಿದ್ದಕ್ಕೆ ಮುಖ್ಯ ಎಂಜಿನಿಯರ್ ಪರಮೇಶ್ವರ್ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಒಳಹರಿವು ಕಾಲುವೆಗಳಲ್ಲಿ ತುಂಬಿಕೊಳ್ಳುವ ಹೂಳನ್ನು ಆಗಿಂದಾಗ್ಗೆ ತೆರವುಗೊಳಿಸುತ್ತಿರಬೇಕು. ನೀರು ಕಟ್ಟಿಕೊಳ್ಳುವ ಇತರ ಪ್ರದೇಶಗಳಲ್ಲಿಯೂ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ಕ್ರಮ ಕೈಕೊಳ್ಳಬೇಕು’ ಎಂದು ಮೇಯರ್ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆ.ಆರ್.ಪುರ ಬಳಿಯ ಪೈ ಬಡಾವಣೆ ಮತ್ತು ಟಿನ್ಫ್ಯಾಕ್ಟರಿ ಜಂಕ್ಷನ್ ಬಳಿಯ ಮೇಲ್ಸೇತುವೆಯ ಕೆಳಭಾಗದಲ್ಲಿ ನೀರು ಕಟ್ಟಿಕೊಳ್ಳುವ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ.</p>.<p>ಇಲ್ಲಿನ 80 ಮೀಟರ್ ಉದ್ದದ ಮೂರು ಕೊಳವೆಗಳಲ್ಲಿ ಹೂಳು ತುಂಬಿಕೊಂಡಿದ್ದ ಪರಿಣಾಮ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ಪ್ರದೇಶ ಜಲಾವೃತಗೊಳ್ಳುತ್ತಿತ್ತು. ಸುಮಾರು 8 ವರ್ಷಗಳಿಂದಲೂ ಈ ಸಮಸ್ಯೆ ಇತ್ತು. ತಿಂಗಳ ಹಿಂದೆ ಸುರಿದ ಮಳೆಗೆ ಈ ಪ್ರದೇಶದಲ್ಲಿ ನೀರು ತುಂಬಿ ಸುಮಾರು ನಾಲ್ಕೈದು ಅಡಿಗಳಷ್ಟು ನೀರು ರಸ್ತೆ ಮೇಲೆ ನಿಂತಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸುವಂತೆ ಮೇಯರ್ ಎಂ.ಗೌತಮ್ ಕುಮಾರ್ ಸೂಚಿಸಿದ್ದರು.</p>.<p>ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮೂರೂ ಕೊಳವೆಗಳಲ್ಲಿನ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಬಳಿಕ ಯಾವುದೇ ಅಡೆ ತಡೆ ಇಲ್ಲದೆಯೇ ನೀರು ಸರಾಗವಾಗಿ ಹರಿಯುತ್ತಿದೆ. ಈ ಪ್ರದೇಶವು ಈ ಬಾರಿ ಮಳೆಗೆ ಜಲಾವೃತವಾಗಿಲ್ಲ.</p>.<p>ಈ ಸ್ಥಳಕ್ಕೆ ಮೇಯರ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರನ್ನು ಅನೇಕ ವರ್ಷಗಳಿಂದ ಕಾಡುತ್ತಿದ್ದ ಸಮಸ್ಯೆ ಬಗೆಹರಿಸಿದ್ದಕ್ಕೆ ಮುಖ್ಯ ಎಂಜಿನಿಯರ್ ಪರಮೇಶ್ವರ್ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಒಳಹರಿವು ಕಾಲುವೆಗಳಲ್ಲಿ ತುಂಬಿಕೊಳ್ಳುವ ಹೂಳನ್ನು ಆಗಿಂದಾಗ್ಗೆ ತೆರವುಗೊಳಿಸುತ್ತಿರಬೇಕು. ನೀರು ಕಟ್ಟಿಕೊಳ್ಳುವ ಇತರ ಪ್ರದೇಶಗಳಲ್ಲಿಯೂ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ಕ್ರಮ ಕೈಕೊಳ್ಳಬೇಕು’ ಎಂದು ಮೇಯರ್ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>