ಇಲ್ಲಿನ 80 ಮೀಟರ್ ಉದ್ದದ ಮೂರು ಕೊಳವೆಗಳಲ್ಲಿ ಹೂಳು ತುಂಬಿಕೊಂಡಿದ್ದ ಪರಿಣಾಮ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ಪ್ರದೇಶ ಜಲಾವೃತಗೊಳ್ಳುತ್ತಿತ್ತು. ಸುಮಾರು 8 ವರ್ಷಗಳಿಂದಲೂ ಈ ಸಮಸ್ಯೆ ಇತ್ತು. ತಿಂಗಳ ಹಿಂದೆ ಸುರಿದ ಮಳೆಗೆ ಈ ಪ್ರದೇಶದಲ್ಲಿ ನೀರು ತುಂಬಿ ಸುಮಾರು ನಾಲ್ಕೈದು ಅಡಿಗಳಷ್ಟು ನೀರು ರಸ್ತೆ ಮೇಲೆ ನಿಂತಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸುವಂತೆ ಮೇಯರ್ ಎಂ.ಗೌತಮ್ ಕುಮಾರ್ ಸೂಚಿಸಿದ್ದರು.