<p><strong>ದಾಬಸ್ಪೇಟೆ:</strong> ಮಾದೇನಹಳ್ಳಿ-ನಿಜಗಲ್ ಕೆಂಪೋಹಳ್ಳಿ ನಡುವಿನ ಮಧುಗಿರಿ ರಸ್ತೆಯಲ್ಲಿ ಟಿಪ್ಪರ್ ಹರಿದು ವಿವೇಕಾನಂದ ಶಾಲೆಯ ಬಸ್ ಚಾಲಕ ಹನುಮಂತರಾಜು ಮೃತಪಟ್ಟಿದ್ದಾರೆ.</p>.<p>ನರಸೀಪುರದ ಹನುಮಂತರಾಜು ಅವರು ಕೆಲಸಕ್ಕೆ ತೆರಳಿದ್ದ ತಮ್ಮ ಪತ್ನಿಯನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಬರುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದು, ಪತಿ ಮೇಲೆ ಲಾರಿ ಚಕ್ರ ಹರಿದಿದೆ. </p>.<p>ಈ ರಸ್ತೆಯಲ್ಲಿ ಟಿಪ್ಪರ್ ಲಾರಿಗಳು ವೇಗವಾಗಿ ಸಂಚಾರ ಮಾಡುತ್ತವೆ. ಇದರಿಂದಲೇ ಅಪಘತವಾಗಿದೆ ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪಂಚಾಯಿತಿ ಮುಂದೆ ಶವದೊಂದಿಗೆ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ದಾಬಸ್ಪೇಟೆ ಠಾಣೆ ಇನ್ಸ್ಪೆಕ್ಟರ್ ರಾಜು, ಪಂಚಾಯಿತಿ ಅಧ್ಯಕ್ಷ ರಾಮಾಂಜನೇಯ ಅವರು ಪ್ರತಿಭಟನಕಾರರ ಮನವೊಲಿಸಿದರು. ಬಳಿಕ ಅಂತ್ಯ ಸಂಸ್ಕಾರ ನೆರವೇರಿತು. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ:</strong> ಮಾದೇನಹಳ್ಳಿ-ನಿಜಗಲ್ ಕೆಂಪೋಹಳ್ಳಿ ನಡುವಿನ ಮಧುಗಿರಿ ರಸ್ತೆಯಲ್ಲಿ ಟಿಪ್ಪರ್ ಹರಿದು ವಿವೇಕಾನಂದ ಶಾಲೆಯ ಬಸ್ ಚಾಲಕ ಹನುಮಂತರಾಜು ಮೃತಪಟ್ಟಿದ್ದಾರೆ.</p>.<p>ನರಸೀಪುರದ ಹನುಮಂತರಾಜು ಅವರು ಕೆಲಸಕ್ಕೆ ತೆರಳಿದ್ದ ತಮ್ಮ ಪತ್ನಿಯನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಬರುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದು, ಪತಿ ಮೇಲೆ ಲಾರಿ ಚಕ್ರ ಹರಿದಿದೆ. </p>.<p>ಈ ರಸ್ತೆಯಲ್ಲಿ ಟಿಪ್ಪರ್ ಲಾರಿಗಳು ವೇಗವಾಗಿ ಸಂಚಾರ ಮಾಡುತ್ತವೆ. ಇದರಿಂದಲೇ ಅಪಘತವಾಗಿದೆ ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪಂಚಾಯಿತಿ ಮುಂದೆ ಶವದೊಂದಿಗೆ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ದಾಬಸ್ಪೇಟೆ ಠಾಣೆ ಇನ್ಸ್ಪೆಕ್ಟರ್ ರಾಜು, ಪಂಚಾಯಿತಿ ಅಧ್ಯಕ್ಷ ರಾಮಾಂಜನೇಯ ಅವರು ಪ್ರತಿಭಟನಕಾರರ ಮನವೊಲಿಸಿದರು. ಬಳಿಕ ಅಂತ್ಯ ಸಂಸ್ಕಾರ ನೆರವೇರಿತು. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>