<p><strong>ಬೆಂಗಳೂರು:</strong> ಮರಳು ತುಂಬಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಮನೆಯ ಗೋಡೆ ಕುಸಿದು ಐದು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ಬಾಳ ಸಮೀಪದ ಭುವನೇಶ್ವರಿ ನಗರದಲ್ಲಿ ಮಂಗಳವಾರ ನಡೆದಿದೆ. ತಮಿಳುನಾಡು ನಿವಾಸಿ, ಕೂಲಿ ಕಾರ್ಮಿಕ ಅಯ್ಯನಾರ್– ರೀನಾ ದಂಪತಿ ಪುತ್ರಿ ಮೋನಿಶಾ ಮೃತಳು.</p>.<p>ಬೆಳಿಗ್ಗೆ 11.30ರ ಸುಮಾರಿಗೆ ಮನೆ ಸಮೀಪ ಖಾಲಿ ನಿವೇಶನದಲ್ಲಿ ಮರಳು ಆನ್ ಲೋಡ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಮನೆಯಲ್ಲಿ ಮಲಗಿದ್ದ ಮಗುವಿನ ಮೇಲೆ ಗೋಡೆ ಕುಸಿದಿದೆ. ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನ ಆಗಲಿಲ್ಲ ಎಂದು ಪೊಲೀಸರು ತಿಳಿಸಿದರು.</p>.<p>ಅಯ್ಯನಾರ್, ಪತ್ನಿ ಮತ್ತು ಪುತ್ರಿ ಜತೆ ಭುವನೇಶ್ವರಿ ನಗರದಲ್ಲಿ ನೆಲೆಸಿದ್ದಾರೆ. ಅವರ ಮನೆ ಪಕ್ಕದ ಖಾಲಿ ನಿವೇಶನದಲ್ಲಿ ಹನುಮಂತ ರೆಡ್ಡಿ ಎಂಬವರು ಮರಳು ಮತ್ತು ಜಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆ ಮರಳು ತುಂಬಿದ್ದ ಲಾರಿ ಅಲ್ಲಿಗೆ ಬಂದಿದ್ದು, ನಿವೇಶನದ ಒಳಗೆ ಹಿಮ್ಮುಖವಾಗಿ ಪ್ರವೇಶಿಸಿ ಮರಳು ಸುರಿಯಲು ಯತ್ನಿಸುವ ವೇಳೆ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ, ಪಕ್ಕದ ಮನೆಗೆ ನುಗ್ಗಿದೆ. ಇದರಿಂದ ಗೋಡೆ ಕುಸಿದಿದೆ ಎಂದು ಪೊಲೀಸರು ಹೇಳಿದರು.</p>.<p>ಹೆಬ್ಬಾಳ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಮರಳು ವ್ಯಾಪಾರಿ ಹನುಮಂತ ರೆಡ್ಡಿ, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p class="Subhead">₹ 50 ಸಾವಿರ ನೆರವು : ಘಟನೆ ನಡೆದ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ತೆರಳಿದ ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್, ಮೃತಳ ಕುಟುಂಬಕ್ಕೆ ವೈಯಕ್ತಿಕವಾಗಿ ₹ 50 ಸಾವಿರ ನೆರವು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮರಳು ತುಂಬಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಮನೆಯ ಗೋಡೆ ಕುಸಿದು ಐದು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ಬಾಳ ಸಮೀಪದ ಭುವನೇಶ್ವರಿ ನಗರದಲ್ಲಿ ಮಂಗಳವಾರ ನಡೆದಿದೆ. ತಮಿಳುನಾಡು ನಿವಾಸಿ, ಕೂಲಿ ಕಾರ್ಮಿಕ ಅಯ್ಯನಾರ್– ರೀನಾ ದಂಪತಿ ಪುತ್ರಿ ಮೋನಿಶಾ ಮೃತಳು.</p>.<p>ಬೆಳಿಗ್ಗೆ 11.30ರ ಸುಮಾರಿಗೆ ಮನೆ ಸಮೀಪ ಖಾಲಿ ನಿವೇಶನದಲ್ಲಿ ಮರಳು ಆನ್ ಲೋಡ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಮನೆಯಲ್ಲಿ ಮಲಗಿದ್ದ ಮಗುವಿನ ಮೇಲೆ ಗೋಡೆ ಕುಸಿದಿದೆ. ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನ ಆಗಲಿಲ್ಲ ಎಂದು ಪೊಲೀಸರು ತಿಳಿಸಿದರು.</p>.<p>ಅಯ್ಯನಾರ್, ಪತ್ನಿ ಮತ್ತು ಪುತ್ರಿ ಜತೆ ಭುವನೇಶ್ವರಿ ನಗರದಲ್ಲಿ ನೆಲೆಸಿದ್ದಾರೆ. ಅವರ ಮನೆ ಪಕ್ಕದ ಖಾಲಿ ನಿವೇಶನದಲ್ಲಿ ಹನುಮಂತ ರೆಡ್ಡಿ ಎಂಬವರು ಮರಳು ಮತ್ತು ಜಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆ ಮರಳು ತುಂಬಿದ್ದ ಲಾರಿ ಅಲ್ಲಿಗೆ ಬಂದಿದ್ದು, ನಿವೇಶನದ ಒಳಗೆ ಹಿಮ್ಮುಖವಾಗಿ ಪ್ರವೇಶಿಸಿ ಮರಳು ಸುರಿಯಲು ಯತ್ನಿಸುವ ವೇಳೆ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ, ಪಕ್ಕದ ಮನೆಗೆ ನುಗ್ಗಿದೆ. ಇದರಿಂದ ಗೋಡೆ ಕುಸಿದಿದೆ ಎಂದು ಪೊಲೀಸರು ಹೇಳಿದರು.</p>.<p>ಹೆಬ್ಬಾಳ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಮರಳು ವ್ಯಾಪಾರಿ ಹನುಮಂತ ರೆಡ್ಡಿ, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p class="Subhead">₹ 50 ಸಾವಿರ ನೆರವು : ಘಟನೆ ನಡೆದ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ತೆರಳಿದ ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್, ಮೃತಳ ಕುಟುಂಬಕ್ಕೆ ವೈಯಕ್ತಿಕವಾಗಿ ₹ 50 ಸಾವಿರ ನೆರವು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>