ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲಗೋಳ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿ, ‘ಆದೇಶ ಮರುಪರಿಶೀಲನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಕುರಿತ ನಿರ್ಧಾರ ಕೈಗೊಳ್ಳಲು ಇನ್ನೂ ಎಂಟು ವಾರ ಕಾಲಾವಕಾಶ ಬೇಕು’ ಎಂದು ಕೋರಿದರು. ಇದಕ್ಕೆ ಸಮ್ಮತಿಸಿದ ನ್ಯಾಯಪೀಠ, ಮಧ್ಯಂತರ ಅರ್ಜಿ ಮಾನ್ಯ ಮಾಡಿ ವಿಚಾರಣೆ ಮುಂದೂಡಿದೆ.