ವ್ಯವಸ್ಥಾಪಕ, ಮೇಲ್ವಿಚಾರಕ ವಿರುದ್ಧ ಪ್ರಕರಣ: ‘ಕಂಪನಿಯ ವ್ಯವಸ್ಥಾಪಕ ಗುರುರಾಜಪ್ಪ ಹಾಗೂ ಮೇಲ್ವಿಚಾರಕ ನಂಜಪ್ಪ, ನನಗೆ ರಜೆ ನೀಡುತ್ತಿರಲಿಲ್ಲ. ಕೆಲಸದ ಸ್ಥಳದಲ್ಲಿ ಕಿರುಕುಳ ನೀಡುತ್ತಿದ್ದರು. ರಜೆ ಕೇಳಿದ್ದಕ್ಕೆ, ಕೆಲಸದಿಂದ ತೆಗೆಯುವುದಾಗಿ ಬೆದರಿಸಿದ್ದರು’ ಎಂದು ಗೋವಿಂದರಾಜ್ ಮರಣಪತ್ರ ಬರೆದಿಟ್ಟಿದ್ದಾರೆ. ಜೊತೆಗೆ, ವಿಡಿಯೊ ಸಹ ಮಾಡಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.