<p><strong>ಬೆಂಗಳೂರು: </strong>ಸಾರ್ವಜನಿಕ ಸ್ಥಳದಲ್ಲಿ ನಿಲುಗಡೆ ಮಾಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ದ್ವಿಚಕ್ರ ವಾಹನವನ್ನು ಅಧಿಕೃತವಾಗಿ ದಂಡ ಕಟ್ಟಿಸಿಕೊಳ್ಳದೇ ಹಿಂದಿರುಗಿಸಲು ₹ 800 ಲಂಚ ಪಡೆದ ಜಯನಗರ ಸಂಚಾರ ಪೊಲೀಸ್ ಠಾಣೆಯ ಟೋಯಿಂಗ್ ವಿಭಾಗದ ಖಾಸಗಿ ಸಿಬ್ಬಂದಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.</p>.<p>ಮಲ್ಲೇಶ್ವರ ನಿವಾಸಿಯೊಬ್ಬರು ಜೆ.ಪಿ. ನಗರದ ಶಾಂತಿ ಸಾಗರ್ ಹೋಟೆಲ್ ಮುಂಭಾಗದಲ್ಲಿ ಶನಿವಾರ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನವನ್ನು ಜಯನಗರ ಸಂಚಾರ ಪೊಲೀಸ್ ಠಾಣೆಯ ಟೋಯಿಂಗ್ ಸಿಬ್ಬಂದಿ ಎಳೆದೊಯ್ದಿದ್ದರು. ಟೋಯಿಂಗ್ ಸಿಬ್ಬಂದಿಯನ್ನು ಸಂಪರ್ಕಿಸಿದ್ದ ವಾಹನ ಮಾಲೀಕರು, ದ್ವಿಚಕ್ರ ವಾಹನವನ್ನು ಬಿಡುವಂತೆ ಮನವಿ ಮಾಡಿದ್ದರು. ‘₹ 1,150 ದಂಡ ಶುಲ್ಕವಿದೆ. ದಂಡವಿಲ್ಲದೇ ವಾಹನ ಬಿಟ್ಟುಕೊಡಲು ₹ 800 ಲಂಚ ನೀಡಬೇಕು’ ಎಂದು ಟೋಯಿಂಗ್ ಸಿಬ್ಬಂದಿ ಬೇಡಿಕೆ ಇಟ್ಟಿದ್ದರು. ಈ ಕುರಿತು ವಾಹನ ಮಾಲೀಕರು ಎಸಿಬಿಯ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.</p>.<p>ಮಂಗಳವಾರ ಮಧ್ಯಾಹ್ನ ವಾಹನ ಪಡೆಯಲು ಜಯನಗರ ಸಂಚಾರ ಪೊಲೀಸ್ ಠಾಣೆಗೆ ತೆರಳಿದ್ದ ದೂರುದಾರರಿಂದ ಟೋಯಿಂಗ್ ಸಿಬ್ಬಂದಿ ₹800 ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದರು. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರ್ವಜನಿಕ ಸ್ಥಳದಲ್ಲಿ ನಿಲುಗಡೆ ಮಾಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ದ್ವಿಚಕ್ರ ವಾಹನವನ್ನು ಅಧಿಕೃತವಾಗಿ ದಂಡ ಕಟ್ಟಿಸಿಕೊಳ್ಳದೇ ಹಿಂದಿರುಗಿಸಲು ₹ 800 ಲಂಚ ಪಡೆದ ಜಯನಗರ ಸಂಚಾರ ಪೊಲೀಸ್ ಠಾಣೆಯ ಟೋಯಿಂಗ್ ವಿಭಾಗದ ಖಾಸಗಿ ಸಿಬ್ಬಂದಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.</p>.<p>ಮಲ್ಲೇಶ್ವರ ನಿವಾಸಿಯೊಬ್ಬರು ಜೆ.ಪಿ. ನಗರದ ಶಾಂತಿ ಸಾಗರ್ ಹೋಟೆಲ್ ಮುಂಭಾಗದಲ್ಲಿ ಶನಿವಾರ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನವನ್ನು ಜಯನಗರ ಸಂಚಾರ ಪೊಲೀಸ್ ಠಾಣೆಯ ಟೋಯಿಂಗ್ ಸಿಬ್ಬಂದಿ ಎಳೆದೊಯ್ದಿದ್ದರು. ಟೋಯಿಂಗ್ ಸಿಬ್ಬಂದಿಯನ್ನು ಸಂಪರ್ಕಿಸಿದ್ದ ವಾಹನ ಮಾಲೀಕರು, ದ್ವಿಚಕ್ರ ವಾಹನವನ್ನು ಬಿಡುವಂತೆ ಮನವಿ ಮಾಡಿದ್ದರು. ‘₹ 1,150 ದಂಡ ಶುಲ್ಕವಿದೆ. ದಂಡವಿಲ್ಲದೇ ವಾಹನ ಬಿಟ್ಟುಕೊಡಲು ₹ 800 ಲಂಚ ನೀಡಬೇಕು’ ಎಂದು ಟೋಯಿಂಗ್ ಸಿಬ್ಬಂದಿ ಬೇಡಿಕೆ ಇಟ್ಟಿದ್ದರು. ಈ ಕುರಿತು ವಾಹನ ಮಾಲೀಕರು ಎಸಿಬಿಯ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.</p>.<p>ಮಂಗಳವಾರ ಮಧ್ಯಾಹ್ನ ವಾಹನ ಪಡೆಯಲು ಜಯನಗರ ಸಂಚಾರ ಪೊಲೀಸ್ ಠಾಣೆಗೆ ತೆರಳಿದ್ದ ದೂರುದಾರರಿಂದ ಟೋಯಿಂಗ್ ಸಿಬ್ಬಂದಿ ₹800 ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದರು. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>