<p><strong>ಬೆಂಗಳೂರು:</strong> ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಮಕ್ಕಳಿಂದ ಸ್ವಚ್ಛಗೊಳಿಸಿದ್ದ ಆರೋಪದಡಿ ಶಾಲೆಯ ಮುಖ್ಯ ಶಿಕ್ಷಕಿ ಟಿ. ಲಕ್ಷ್ಮಿದೇವಮ್ಮ ಅವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಾಲೆಯ ಶೌಚಾಲಯವನ್ನು ಮಕ್ಕಳು ಸ್ವಚ್ಛಗೊಳಿಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ಆಂಜನಪ್ಪ, ಮುಖ್ಯ ಶಿಕ್ಷಕಿ ವಿರುದ್ಧ ಉಪ ನಿರ್ದೇಶಕರಿಗೆ ವರದಿ ನೀಡಿದ್ದರು. ನಂತರ, ಮುಖ್ಯ ಶಿಕ್ಷಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.</p>.<p>ಘಟನೆಗೆ ಸಂಬಂಧಪಟ್ಟಂತೆ, ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ವಿರುದ್ಧ ಕೆ.ಜಿ. ಆಂಜನಪ್ಪ ಅವರು ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದರು. ಬಾಲ ನ್ಯಾಯ ಕಾಯ್ದೆ ಹಾಗೂ ಮನುಷ್ಯರನ್ನು ಮಲ ಸ್ವಚ್ಛಗೊಳಿಸಲು ನಿಯೋಜಿಸಿಕೊಳ್ಳುವ ಹಾಗೂ ಪುನರ್ವಸತಿ ಕಾಯ್ದೆಯಡಿ ಲಕ್ಷ್ಮಿದೇವಮ್ಮ ವಿರುದ್ಧ ಎಫ್ಐಆರ್ ದಾಖಲಾಗಿತ್ತು.</p>.<p>‘ಪ್ರಕರಣ ದಾಖಲಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಶನಿವಾರ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಮುಖ್ಯ ಶಿಕ್ಷಕಿ ಸೂಚನೆ ಮೇರೆಗೆ ಮಕ್ಕಳಿಬ್ಬರು ಶೌಚಾಲಯ ಸ್ವಚ್ಛಗೊಳಿಸಿದ್ದರು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ, ಒಬ್ಬನ ಹೇಳಿಕೆ ಸಹ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಯೊಬ್ಬರನ್ನೂ ವಿಚಾರಣೆ ನಡೆಸಿ ಪುನಃ ಹೇಳಿಕೆ ಪಡೆಯಲಾಗುವುದು’ ಎಂದು ತಿಳಿಸಿದರು.</p>.<p>‘ಶಾಲೆ ಶಿಕ್ಷಕರ ಪಾತ್ರದ ಬಗ್ಗೆ ದೂರಿನಲ್ಲಿ ಯಾವುದೇ ಉಲ್ಲೇಖವಿಲ್ಲ. ಮಕ್ಕಳು ನೀಡುವ ಹೇಳಿಕೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆಯೂ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದ್ದ ಬಗ್ಗೆ ಮಾಹಿತಿ ಇದೆ. ಆ ಮಕ್ಕಳಿಂದಲೂ ಹೇಳಿಕೆ ಪಡೆಯಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಮಕ್ಕಳಿಂದ ಸ್ವಚ್ಛಗೊಳಿಸಿದ್ದ ಆರೋಪದಡಿ ಶಾಲೆಯ ಮುಖ್ಯ ಶಿಕ್ಷಕಿ ಟಿ. ಲಕ್ಷ್ಮಿದೇವಮ್ಮ ಅವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಾಲೆಯ ಶೌಚಾಲಯವನ್ನು ಮಕ್ಕಳು ಸ್ವಚ್ಛಗೊಳಿಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ಆಂಜನಪ್ಪ, ಮುಖ್ಯ ಶಿಕ್ಷಕಿ ವಿರುದ್ಧ ಉಪ ನಿರ್ದೇಶಕರಿಗೆ ವರದಿ ನೀಡಿದ್ದರು. ನಂತರ, ಮುಖ್ಯ ಶಿಕ್ಷಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.</p>.<p>ಘಟನೆಗೆ ಸಂಬಂಧಪಟ್ಟಂತೆ, ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ವಿರುದ್ಧ ಕೆ.ಜಿ. ಆಂಜನಪ್ಪ ಅವರು ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದರು. ಬಾಲ ನ್ಯಾಯ ಕಾಯ್ದೆ ಹಾಗೂ ಮನುಷ್ಯರನ್ನು ಮಲ ಸ್ವಚ್ಛಗೊಳಿಸಲು ನಿಯೋಜಿಸಿಕೊಳ್ಳುವ ಹಾಗೂ ಪುನರ್ವಸತಿ ಕಾಯ್ದೆಯಡಿ ಲಕ್ಷ್ಮಿದೇವಮ್ಮ ವಿರುದ್ಧ ಎಫ್ಐಆರ್ ದಾಖಲಾಗಿತ್ತು.</p>.<p>‘ಪ್ರಕರಣ ದಾಖಲಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಶನಿವಾರ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಮುಖ್ಯ ಶಿಕ್ಷಕಿ ಸೂಚನೆ ಮೇರೆಗೆ ಮಕ್ಕಳಿಬ್ಬರು ಶೌಚಾಲಯ ಸ್ವಚ್ಛಗೊಳಿಸಿದ್ದರು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ, ಒಬ್ಬನ ಹೇಳಿಕೆ ಸಹ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಯೊಬ್ಬರನ್ನೂ ವಿಚಾರಣೆ ನಡೆಸಿ ಪುನಃ ಹೇಳಿಕೆ ಪಡೆಯಲಾಗುವುದು’ ಎಂದು ತಿಳಿಸಿದರು.</p>.<p>‘ಶಾಲೆ ಶಿಕ್ಷಕರ ಪಾತ್ರದ ಬಗ್ಗೆ ದೂರಿನಲ್ಲಿ ಯಾವುದೇ ಉಲ್ಲೇಖವಿಲ್ಲ. ಮಕ್ಕಳು ನೀಡುವ ಹೇಳಿಕೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆಯೂ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದ್ದ ಬಗ್ಗೆ ಮಾಹಿತಿ ಇದೆ. ಆ ಮಕ್ಕಳಿಂದಲೂ ಹೇಳಿಕೆ ಪಡೆಯಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>