<p><strong>ಬೆಂಗಳೂರು</strong>: ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ‘ಟೋಯಿಂಗ್’ ಕಾರ್ಯಾಚರಣೆಯ ಎರಡನೇ ದಿನವಾದ ಭಾನುವಾರ ನಗರದಲ್ಲಿ 70ಕ್ಕೂ ಅಧಿಕ ಪ್ರಕರಣ ದಾಖಲಿಸಲಾಗಿದೆ.</p>.<p>ಎರಡೂವರೆ ವರ್ಷದ ಬಳಿಕ ಮತ್ತೆ ಉಪ್ಪಾರಪೇಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಎರಡೇ ದಿನಕ್ಕೆ ಟೋಯಿಂಗ್ ಮಾಡಿದ ವಾಹನಗಳ ಸಂಖ್ಯೆ ಶತಕ ದಾಟಿದೆ. ಮೊದಲ ದಿನ 30 ಟೋಯಿಂಗ್ ಪ್ರಕರಣಗಳು ದಾಖಲಾಗಿದ್ದವು.</p>.<p>ಟೋಯಿಂಗ್ಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಎರಡು ವಾಹನ ಪೂರೈಕೆ ಮಾಡಲಾಗಿದೆ. ಆರಂಭದಲ್ಲಿ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಗುತ್ತದೆ. ಆದರೂ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿದರೆ ಟೋಯಿಂಗ್ ಮಾಡಲಾಗುತ್ತದೆ. ಟೋಯಿಂಗ್ಗೆ ಶುಲ್ಕ ವಿಧಿಸುತ್ತಿಲ್ಲ.</p>.<p>ಗಾಂಧಿನಗರ ಮತ್ತು ಇತರ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ನಿಲುಗಡೆ ಮಾಡಿದ ವಾಹನಗಳನ್ನು ತೆರವುಗೊಳಿಸುವತ್ತ ಗಮನಹರಿಸಲಾಗುತ್ತಿದೆ.<br><br>ವಾಹನ ಸವಾರರು ಸ್ವಾತಂತ್ರ್ಯ ಉದ್ಯಾನದಲ್ಲಿರುವ ಹೊಸ ಪಾರ್ಕಿಂಗ್ ಸಂಕೀರ್ಣ ಬಳಸಿಕೊಳ್ಳಲು ಮತ್ತು ನಿಷೇಧಿತ ಪ್ರದೇಶಗಳಲ್ಲಿ ಅಥವಾ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡದಂತೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ‘ಟೋಯಿಂಗ್’ ಕಾರ್ಯಾಚರಣೆಯ ಎರಡನೇ ದಿನವಾದ ಭಾನುವಾರ ನಗರದಲ್ಲಿ 70ಕ್ಕೂ ಅಧಿಕ ಪ್ರಕರಣ ದಾಖಲಿಸಲಾಗಿದೆ.</p>.<p>ಎರಡೂವರೆ ವರ್ಷದ ಬಳಿಕ ಮತ್ತೆ ಉಪ್ಪಾರಪೇಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಎರಡೇ ದಿನಕ್ಕೆ ಟೋಯಿಂಗ್ ಮಾಡಿದ ವಾಹನಗಳ ಸಂಖ್ಯೆ ಶತಕ ದಾಟಿದೆ. ಮೊದಲ ದಿನ 30 ಟೋಯಿಂಗ್ ಪ್ರಕರಣಗಳು ದಾಖಲಾಗಿದ್ದವು.</p>.<p>ಟೋಯಿಂಗ್ಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಎರಡು ವಾಹನ ಪೂರೈಕೆ ಮಾಡಲಾಗಿದೆ. ಆರಂಭದಲ್ಲಿ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಗುತ್ತದೆ. ಆದರೂ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿದರೆ ಟೋಯಿಂಗ್ ಮಾಡಲಾಗುತ್ತದೆ. ಟೋಯಿಂಗ್ಗೆ ಶುಲ್ಕ ವಿಧಿಸುತ್ತಿಲ್ಲ.</p>.<p>ಗಾಂಧಿನಗರ ಮತ್ತು ಇತರ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ನಿಲುಗಡೆ ಮಾಡಿದ ವಾಹನಗಳನ್ನು ತೆರವುಗೊಳಿಸುವತ್ತ ಗಮನಹರಿಸಲಾಗುತ್ತಿದೆ.<br><br>ವಾಹನ ಸವಾರರು ಸ್ವಾತಂತ್ರ್ಯ ಉದ್ಯಾನದಲ್ಲಿರುವ ಹೊಸ ಪಾರ್ಕಿಂಗ್ ಸಂಕೀರ್ಣ ಬಳಸಿಕೊಳ್ಳಲು ಮತ್ತು ನಿಷೇಧಿತ ಪ್ರದೇಶಗಳಲ್ಲಿ ಅಥವಾ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡದಂತೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>