<p><strong>ಬೆಂಗಳೂರು:</strong> ನಷ್ಟದಲ್ಲಿರುವ ಸಾರ್ವಜನಿಕ ಉದ್ಯಮಗಳಲ್ಲೇ ನಿರಂತರವಾಗಿ ರಾಜ್ಯ ಸರ್ಕಾರವು ಹೆಚ್ಚಿನ ಹೂಡಿಕೆ ಮಾಡುತ್ತಿದ್ದು, ಇದರಿಂದ ಶೇ 0.10ರಷ್ಟು ಮಾತ್ರ ಪ್ರತಿಫಲ ಲಭಿಸುತ್ತಿದೆ ಎಂದುಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ (ಸಿಎಜಿ) ವರದಿ ಹೇಳಿದೆ.</p>.<p>87 ಸರ್ಕಾರಿ ಕಂಪನಿಗಳು, ಒಂಬತ್ತು ನಿಗಮಗಳು, 44 ಕೂಡು ಬಂಡವಾಳ ಕಂಪನಿಗಳು, ಸಹಕಾರಿ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ 2019ರ ಮಾರ್ಚ್ ಅಂತ್ಯಕ್ಕೆ ರಾಜ್ಯ ಸರ್ಕಾರವು ₹ 66,518 ಕೋಟಿ ಹೂಡಿಕೆ ಮಾಡಿದೆ. ಈ ಪೈಕಿ ನಷ್ಟದಲ್ಲಿರುವ 7 ಪ್ರಮುಖ ಉದ್ದಿಮೆಗಳಲ್ಲಿ ₹ 38,948.50 ಕೋಟಿ ಹೂಡಿಕೆ ಮಾಡಲಾಗಿದೆ. ಈ ಉದ್ದಿಮೆಗಳು ₹ 8,273.67 ಕೋಟಿಯಷ್ಟು ಸಂಚಿತ ನಷ್ಟ ಅನುಭವಿಸುತ್ತಿದ್ದವು ಎಂಬ ಉಲ್ಲೇಖ ವರದಿಯಲ್ಲಿದೆ.</p>.<p>2014–15ರಲ್ಲಿ ಸಾರ್ವಜನಿಕ ಉದ್ದಿಮೆಗಳಲ್ಲಿನ ಹೂಡಿಕೆಯ ಒಟ್ಟು ಮೊತ್ತ ₹ 61,726.92 ಕೋಟಿಯಷ್ಟಿತ್ತು. ಆಗ ₹ 74.84 ಕೋಟಿ (ಶೇ 0.10) ಪ್ರತಿಫಲ ಲಭಿಸಿತ್ತು. 2018–19ರ ಅಂತ್ಯಕ್ಕೆ ಹೂಡಿಕೆ ಮೊತ್ತ ₹ 66,518.28 ಕೋಟಿ ತಲುಪಿತ್ತು. ಆಗ ₹ 38.30 ಕೋಟಿ (0.10ಕ್ಕಿಂತ ಕಡಿಮೆ) ಪ್ರತಿಫಲ ಲಭಿಸಿತ್ತು. ಆದರೆ, ಈ ಉದ್ದೇಶಕ್ಕಾಗಿ ಪಡೆದ ಸಾಲಗಳ ಮೇಲಿನ ಬಡ್ಡಿಯು ಶೇ 8.2ರಷ್ಟಿತ್ತು ಎಂಬ ಉಲ್ಲೇಖ ವರದಿಯಲ್ಲಿದೆ.</p>.<p>2018–19ರಲ್ಲಿ ರಾಜ್ಯ ಸರ್ಕಾರವು ವಿವಿಧ ಕಂಪನಿಗಳು, ನಿಗಮಗಳು ಮತ್ತು ಸಹಕಾರಿ ಸಂಸ್ಥೆಗಳಿಗೆ ₹ 4,487 ಕೋಟಿ ಸಾಲವನ್ನು ನೀಡಿತ್ತು. ಈ ಪೈಕಿ 35 ಪ್ರಕರಣಗಳಲ್ಲಿ ಯಾವುದೇ ನಿಬಂಧನೆ, ಷರತ್ತುಗಳನ್ನು ವಿಧಿಸದೇ ₹ 3,149.23 ಕೋಟಿ ಸಾಲ ಮಂಜೂರು ಮಾಡಲಾಗಿತ್ತು. 2019ರ ಮಾರ್ಚ್ ಅಂತ್ಯಕ್ಕೆ ಸರ್ಕಾರವು ನೀಡಿದ ಸಾಲಗಳ ಒಟ್ಟು ಮೊತ್ತವು ₹ 24,981 ಕೋಟಿಯಷ್ಟಿತ್ತು. ಆ ಸಮಯದಲ್ಲಿ ಮರುಪಾವತಿಯ ಮೊತ್ತವು ಕೇವಲ ₹ 31 ಕೋಟಿಯಷ್ಟಾಗಿತ್ತು ಎಂಬುದನ್ನು ಸಿಎಜಿ ಬಹಿರಂಗಪಡಿಸಿದೆ.</p>.<p>**<br />2018–19ರಲ್ಲಿ 20 ಪ್ರಕರಣಗಳಲ್ಲಿ ಪೂರಕ ಅಂದಾಜಿನಡಿ ಅನಗತ್ಯವಾಗಿ ₹ 1,319.88 ಕೋಟಿಯನ್ನು ಪಡೆಯಲಾಗಿತ್ತು. 27 ಲೆಕ್ಕ ಶೀರ್ಷಿಕೆಗಳಲ್ಲಿ ₹ 1,780 ಕೋಟಿಯನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿದೆ. ನಾಲ್ಕು ಪ್ರಕರಣಗಳಲ್ಲಿ ವಿಧಾನಮಂಡಲದ ಒಪ್ಪಿಗೆ ಪಡೆಯದೇ ₹ 686.82 ಕೋಟಿಯನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>**<br />‘2018–19ನೇ ಆರ್ಥಿಕ ವರ್ಷದ ಕೊನೆಯ ಎರಡು ದಿನಗಳಲ್ಲಿ ₹ 7,667.67 ಕೋಟಿಯಷ್ಟು ಮೊತ್ತವನ್ನು ವಾಪಸ್ ಮಾಡಲಾಗಿತ್ತು. 19 ಅನುದಾನಗಳಲ್ಲಿ ₹ 5 ಕೋಟಿಗಿಂತಲೂ ಹೆಚ್ಚು ಉಳಿತಾಯವಾಗಿದ್ದ ಮೊತ್ತವನ್ನು ಆರ್ಥಿಕ ವರ್ಷದ ಕೊನೆಯ ಎರಡು ದಿನಗಳಲ್ಲಿ ವಾಪಸ್ ನೀಡಲಾಗಿದೆ’ ಎಂದು ಸಿಎಜಿ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಷ್ಟದಲ್ಲಿರುವ ಸಾರ್ವಜನಿಕ ಉದ್ಯಮಗಳಲ್ಲೇ ನಿರಂತರವಾಗಿ ರಾಜ್ಯ ಸರ್ಕಾರವು ಹೆಚ್ಚಿನ ಹೂಡಿಕೆ ಮಾಡುತ್ತಿದ್ದು, ಇದರಿಂದ ಶೇ 0.10ರಷ್ಟು ಮಾತ್ರ ಪ್ರತಿಫಲ ಲಭಿಸುತ್ತಿದೆ ಎಂದುಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ (ಸಿಎಜಿ) ವರದಿ ಹೇಳಿದೆ.</p>.<p>87 ಸರ್ಕಾರಿ ಕಂಪನಿಗಳು, ಒಂಬತ್ತು ನಿಗಮಗಳು, 44 ಕೂಡು ಬಂಡವಾಳ ಕಂಪನಿಗಳು, ಸಹಕಾರಿ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ 2019ರ ಮಾರ್ಚ್ ಅಂತ್ಯಕ್ಕೆ ರಾಜ್ಯ ಸರ್ಕಾರವು ₹ 66,518 ಕೋಟಿ ಹೂಡಿಕೆ ಮಾಡಿದೆ. ಈ ಪೈಕಿ ನಷ್ಟದಲ್ಲಿರುವ 7 ಪ್ರಮುಖ ಉದ್ದಿಮೆಗಳಲ್ಲಿ ₹ 38,948.50 ಕೋಟಿ ಹೂಡಿಕೆ ಮಾಡಲಾಗಿದೆ. ಈ ಉದ್ದಿಮೆಗಳು ₹ 8,273.67 ಕೋಟಿಯಷ್ಟು ಸಂಚಿತ ನಷ್ಟ ಅನುಭವಿಸುತ್ತಿದ್ದವು ಎಂಬ ಉಲ್ಲೇಖ ವರದಿಯಲ್ಲಿದೆ.</p>.<p>2014–15ರಲ್ಲಿ ಸಾರ್ವಜನಿಕ ಉದ್ದಿಮೆಗಳಲ್ಲಿನ ಹೂಡಿಕೆಯ ಒಟ್ಟು ಮೊತ್ತ ₹ 61,726.92 ಕೋಟಿಯಷ್ಟಿತ್ತು. ಆಗ ₹ 74.84 ಕೋಟಿ (ಶೇ 0.10) ಪ್ರತಿಫಲ ಲಭಿಸಿತ್ತು. 2018–19ರ ಅಂತ್ಯಕ್ಕೆ ಹೂಡಿಕೆ ಮೊತ್ತ ₹ 66,518.28 ಕೋಟಿ ತಲುಪಿತ್ತು. ಆಗ ₹ 38.30 ಕೋಟಿ (0.10ಕ್ಕಿಂತ ಕಡಿಮೆ) ಪ್ರತಿಫಲ ಲಭಿಸಿತ್ತು. ಆದರೆ, ಈ ಉದ್ದೇಶಕ್ಕಾಗಿ ಪಡೆದ ಸಾಲಗಳ ಮೇಲಿನ ಬಡ್ಡಿಯು ಶೇ 8.2ರಷ್ಟಿತ್ತು ಎಂಬ ಉಲ್ಲೇಖ ವರದಿಯಲ್ಲಿದೆ.</p>.<p>2018–19ರಲ್ಲಿ ರಾಜ್ಯ ಸರ್ಕಾರವು ವಿವಿಧ ಕಂಪನಿಗಳು, ನಿಗಮಗಳು ಮತ್ತು ಸಹಕಾರಿ ಸಂಸ್ಥೆಗಳಿಗೆ ₹ 4,487 ಕೋಟಿ ಸಾಲವನ್ನು ನೀಡಿತ್ತು. ಈ ಪೈಕಿ 35 ಪ್ರಕರಣಗಳಲ್ಲಿ ಯಾವುದೇ ನಿಬಂಧನೆ, ಷರತ್ತುಗಳನ್ನು ವಿಧಿಸದೇ ₹ 3,149.23 ಕೋಟಿ ಸಾಲ ಮಂಜೂರು ಮಾಡಲಾಗಿತ್ತು. 2019ರ ಮಾರ್ಚ್ ಅಂತ್ಯಕ್ಕೆ ಸರ್ಕಾರವು ನೀಡಿದ ಸಾಲಗಳ ಒಟ್ಟು ಮೊತ್ತವು ₹ 24,981 ಕೋಟಿಯಷ್ಟಿತ್ತು. ಆ ಸಮಯದಲ್ಲಿ ಮರುಪಾವತಿಯ ಮೊತ್ತವು ಕೇವಲ ₹ 31 ಕೋಟಿಯಷ್ಟಾಗಿತ್ತು ಎಂಬುದನ್ನು ಸಿಎಜಿ ಬಹಿರಂಗಪಡಿಸಿದೆ.</p>.<p>**<br />2018–19ರಲ್ಲಿ 20 ಪ್ರಕರಣಗಳಲ್ಲಿ ಪೂರಕ ಅಂದಾಜಿನಡಿ ಅನಗತ್ಯವಾಗಿ ₹ 1,319.88 ಕೋಟಿಯನ್ನು ಪಡೆಯಲಾಗಿತ್ತು. 27 ಲೆಕ್ಕ ಶೀರ್ಷಿಕೆಗಳಲ್ಲಿ ₹ 1,780 ಕೋಟಿಯನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿದೆ. ನಾಲ್ಕು ಪ್ರಕರಣಗಳಲ್ಲಿ ವಿಧಾನಮಂಡಲದ ಒಪ್ಪಿಗೆ ಪಡೆಯದೇ ₹ 686.82 ಕೋಟಿಯನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>**<br />‘2018–19ನೇ ಆರ್ಥಿಕ ವರ್ಷದ ಕೊನೆಯ ಎರಡು ದಿನಗಳಲ್ಲಿ ₹ 7,667.67 ಕೋಟಿಯಷ್ಟು ಮೊತ್ತವನ್ನು ವಾಪಸ್ ಮಾಡಲಾಗಿತ್ತು. 19 ಅನುದಾನಗಳಲ್ಲಿ ₹ 5 ಕೋಟಿಗಿಂತಲೂ ಹೆಚ್ಚು ಉಳಿತಾಯವಾಗಿದ್ದ ಮೊತ್ತವನ್ನು ಆರ್ಥಿಕ ವರ್ಷದ ಕೊನೆಯ ಎರಡು ದಿನಗಳಲ್ಲಿ ವಾಪಸ್ ನೀಡಲಾಗಿದೆ’ ಎಂದು ಸಿಎಜಿ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>