<p><strong>ಯಲಹಂಕ:‘</strong>ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಜಾತಿ-ಮತ, ವರ್ಣ ಮತ್ತು ಧರ್ಮಗಳನ್ನು ಬದಿಗಿಡಬೇಕು. ವ್ಯಕ್ತಿಯ ಅರ್ಹತೆ ಹಾಗೂ ಪ್ರತಿಭೆಗಳನ್ನು ಗುರುತಿಸಿ ಅರ್ಹ ಹುದ್ದೆಗಳಿಗೆ ಸೂಕ್ತ ವ್ಯಕ್ತಿಗಳನ್ನು ನೇಮಿಸಬೇಕು’ ಎಂದು ಶಿಕ್ಷಣತಜ್ಞ ಕೆ.ಪಿ.ಪುತ್ತೂರಾಯ ತಿಳಿಸಿದರು.</p>.<p>ಎಸ್ಸೆಸ್ಸೆಲ್ಸಿಯಲ್ಲಿರ್ಯಾಂಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ದ್ವಿತೀಯ ಪಿಯುರ್ಯಾಂಕ್ ವಿದ್ಯಾರ್ಥಿಗಳಿಗೆ ಇಲ್ಲಿನ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಭೆಗೆ ಯಾವುದೇ ಜಾತಿ, ಬಡತನ ಅಡ್ಡಿ ಬರುವುದಿಲ್ಲ. ಜೀವನದಲ್ಲಿ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ದೊಡ್ಡ ಕನಸು ಕಾಣಬೇಕು. ಪ್ರಾಮಾಣಿಕತೆ, ಮಾನವೀಯತೆ, ಕಠಿಣ ಪರಿಶ್ರಮ ಹಾಗೂ ಛಲದ ಗುಣಗಳನ್ನು ಮೈಗೂಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟಬುತ್ತಿ’ ಎಂದರು.</p>.<p>ಶಿಕ್ಷಣ ತಜ್ಞ ವೂಡೇ.ಪಿ.ಕೃಷ್ಣ, ‘ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 37 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಅವರ ಪ್ರತಿಭೆಯನ್ನು ಗೌರವಿಸಲಾಗಿದೆ. ಒಳ್ಳೆಯ ಚಿಂತನೆಗಳನ್ನು ಮೈಗೂಡಿಸಿಕೊಂಡರೆ, ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ’ ಎಂದು ಹೇಳಿದರು.</p>.<p>ಶೇಷಾದ್ರಿಪುರ ಶಿಕ್ಷಣ ದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷ ನಾರಾಯಣ, ಟ್ರಸ್ಟಿ ಅಶೋಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:‘</strong>ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಜಾತಿ-ಮತ, ವರ್ಣ ಮತ್ತು ಧರ್ಮಗಳನ್ನು ಬದಿಗಿಡಬೇಕು. ವ್ಯಕ್ತಿಯ ಅರ್ಹತೆ ಹಾಗೂ ಪ್ರತಿಭೆಗಳನ್ನು ಗುರುತಿಸಿ ಅರ್ಹ ಹುದ್ದೆಗಳಿಗೆ ಸೂಕ್ತ ವ್ಯಕ್ತಿಗಳನ್ನು ನೇಮಿಸಬೇಕು’ ಎಂದು ಶಿಕ್ಷಣತಜ್ಞ ಕೆ.ಪಿ.ಪುತ್ತೂರಾಯ ತಿಳಿಸಿದರು.</p>.<p>ಎಸ್ಸೆಸ್ಸೆಲ್ಸಿಯಲ್ಲಿರ್ಯಾಂಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ದ್ವಿತೀಯ ಪಿಯುರ್ಯಾಂಕ್ ವಿದ್ಯಾರ್ಥಿಗಳಿಗೆ ಇಲ್ಲಿನ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಭೆಗೆ ಯಾವುದೇ ಜಾತಿ, ಬಡತನ ಅಡ್ಡಿ ಬರುವುದಿಲ್ಲ. ಜೀವನದಲ್ಲಿ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ದೊಡ್ಡ ಕನಸು ಕಾಣಬೇಕು. ಪ್ರಾಮಾಣಿಕತೆ, ಮಾನವೀಯತೆ, ಕಠಿಣ ಪರಿಶ್ರಮ ಹಾಗೂ ಛಲದ ಗುಣಗಳನ್ನು ಮೈಗೂಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟಬುತ್ತಿ’ ಎಂದರು.</p>.<p>ಶಿಕ್ಷಣ ತಜ್ಞ ವೂಡೇ.ಪಿ.ಕೃಷ್ಣ, ‘ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 37 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಅವರ ಪ್ರತಿಭೆಯನ್ನು ಗೌರವಿಸಲಾಗಿದೆ. ಒಳ್ಳೆಯ ಚಿಂತನೆಗಳನ್ನು ಮೈಗೂಡಿಸಿಕೊಂಡರೆ, ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ’ ಎಂದು ಹೇಳಿದರು.</p>.<p>ಶೇಷಾದ್ರಿಪುರ ಶಿಕ್ಷಣ ದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷ ನಾರಾಯಣ, ಟ್ರಸ್ಟಿ ಅಶೋಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>