ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯ ನಾಗಣ್ಣ, ‘ಕುಣಿಗಲ್ ತಾಲ್ಲೂಕಿನ ಜನ ಅಭಿವೃದ್ಧಿ ವಿರೋಧಿಗಳಲ್ಲ. ಸರ್ಕಾರ ಇಲ್ಲಿನ ಯುವ ಸಮುದಾಯಕ್ಕೆ ಉದ್ಯೋಗ ನೀಡಲು ಕೈಗಾರಿಕೆ, ಐಟಿ–ಬಿಟಿ ಕಂಪನಿಗಳನ್ನು ಸ್ಥಾಪಿಸುವ ಉದ್ದೇಶವಿದ್ದರೆ, ಕುಣಿಗಲ್ ತಾಲ್ಲೂಕಿನ ಬೇರೆ ಕಡೆ, ಖಾಲಿ ಇರುವ ಜಾಗದಲ್ಲಿ ಸ್ಥಾಪಿಸಬಹುದು. ಅದನ್ನು ಬಿಟ್ಟು ಐತಿಹಾಸಿಕ ಪರಂಪರೆ ಹೊಂದಿರುವ ಕುದುರೆ ಫಾರಂನಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಿಸುವ ಸರ್ಕಾರದ ನಿಲುವಿಗೆ ಕುಣಿಗಲ್ನ ಪ್ರತಿಯೊಬ್ಬ ಸ್ವಾಭಿಮಾನಿ ನಾಗರಿಕನ ವಿರೋಧವಿದೆ’ ಎಂದು ತಿಳಿಸಿದರು.