ಒಟ್ಟು 17 ಬಹುರಾಷ್ಟ್ರೀಯ ಕಂಪನಿಗಳ ಕಾರ್ಮಿಕ ಪ್ರತಿನಿಧಿಗಳು ಹಾಗೂ ಕಾರ್ಮಿಕ ಪರ ಸಂಘಟನೆಗಳ ಮುಖಂಡರ ಜೊತೆಗೂಡಿ ನಿಯೋಗ ಒಯ್ದು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗುವುದು. ಟೊಯೊಟಾ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಕೋರಲಾಗುವುದು. ಆದರೆ ಈ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದ್ದು, ಭೇಟಿಯ ದಿನಾಂಕ ಅಂತಿಮಗೊಂಡಿಲ್ಲ ಎಂದು ಟಿಕೆಎಂ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಚಕ್ಕೆರೆ ಹಾಗೂ ಕಾರ್ಯದರ್ಶಿ ಬಸವರಾಜ ಹವಾಲ್ದಾರ್ ತಿಳಿಸಿದರು.