<p><strong>ಬೆಂಗಳೂರು</strong>: ದಾಬಸ್ಪೇಟೆ– ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ₹1,200 ಕೋಟಿ ಹೂಡಿಕೆಯ ಮೂಲಕ ಜಾಗತಿಕ ಮಟ್ಟದ ‘ಬಿಝ್ಇಂಟೆಲ್’ ಹಬ್ ಸ್ಥಾಪಿಸಲಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯ ಸಿಒಒ ಮತ್ತು ವಿಶೇಷ ಯೋಜನೆಯ ನಿರ್ದೇಶಕ ಸುದೀಪ್ ದಳವಿ ಅವರು ಈ ಕುರಿತ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಹೂಡಿಕೆಗೆ ಸಹಕಾರ ನೀಡುತ್ತೇವೆ. ಈ ರೀತಿಯ ಘಟಕ ಸ್ಥಾಪನೆ ಆಗುತ್ತಿರುವುದು ವಿಶ್ವದಲ್ಲೇ ಇದೇ ಮೊದಲು ಎನ್ನುವ ವಿಷಯ ಕೇಳಿ ಸಂತಸವಾಯಿತು’ ಎಂದು ಹೇಳಿದರು.</p>.<p>ಸಚಿವ ಎಂ.ಬಿ.ಪಾಟೀಲ ಮಾತನಾಡಿ, ‘ಇದು ಕ್ವಿನ್ ಸಿಟಿಯಲ್ಲಿ ನಡೆಯುತ್ತಿರುವ ಪ್ರಥಮ ಹೂಡಿಕೆ. ಕಂಪನಿಯು ಐದು ವರ್ಷಗಳಲ್ಲಿ ₹1,200 ಕೋಟಿ ಆರಂಭಿಕವಾಗಿ ಬಂಡವಾಳ ಹೂಡಲಿದೆ. ಇದರಿಂದ 200 ಉದ್ಯೋಗ ಸೃಷ್ಟಿಆಗಲಿವೆ. ಇದಕ್ಕಾಗಿ ಅಲ್ಲಿ ಟೊಯೋಟಾ ಕಂಪನಿಗೆ 300 ಎಕರೆ ಭೂಮಿ ಒದಗಿಸಲಾಗುವುದು. ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆ, ಆಧುನಿಕ ವಾಹನ ತಯಾರಿಕಾ ಸ್ಥಾವರ ಆರಂಭ ಎಲ್ಲವೂ ನಡೆಯಲಿವೆ. ಇದು ರಾಜ್ಯದ ಯುವ ಜನರಿಗೆ ವರದಾನವಾಗಲಿದೆ’ ಎಂದರು.</p>.<p>‘ಕ್ವಿನ್ ಸಿಟಿಯಲ್ಲಿ ನಾವೀನ್ಯ, ಆರೋಗ್ಯ ಸೇವೆಗಳು ಮತ್ತು ಐಟಿ ತಂತ್ರಜ್ಞಾನಕ್ಕೆ ಆದ್ಯತೆ ಕೊಡಲಾಗುವುದು. ಇಲ್ಲಿ ಹೂಡಿಕೆ ಮಾಡಲು ಜಾಗತಿಕ ಮಟ್ಟದ ಏಳೆಂಟು ವಿಶ್ವವಿದ್ಯಾಲಯಗಳು, ಆರೋಗ್ಯ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು ಈಗಾಗಲೇ ಮುಂದೆ ಬಂದಿವೆ. ಅವುಗಳೊಂದಿಗೂ ಆದಷ್ಟು ತ್ವರಿತವಾಗಿ ಒಡಂಬಡಿಕೆಗೆ ಅಂತಿಮರೂಪ ನೀಡಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ ಎಂದರು.</p>.<p>ಈ ಅತ್ಯಾಧುನಿಕ ನಗರವು ಒಟ್ಟು 5,800 ಎಕರೆಯಲ್ಲಿ ಹಂತಹಂತವಾಗಿ ಅಸ್ತಿತ್ವಕ್ಕೆ ಬರಲಿದೆ. ಈಗಾಗಲೇ ಮೊದಲ ಹಂತದ ಅಭಿವೃದ್ಧಿ ಪ್ರಗತಿಯಲ್ಲಿದೆ. ಈ ಯೋಜನೆಗೆ ಒಟ್ಟು ₹48 ಸಾವಿರ ಕೋಟಿ ಹೂಡಿಕೆ ಆಗಲಿದೆ. ಒಟ್ಟಾರೆ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಪಾಟೀಲ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಇಲಾಖೆ ಆಯುಕ್ತೆ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೋಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ, ಉನ್ನತ ಮಟ್ಟದ ಪ್ರತಿನಿಧಿಗಳಾದ ಜಿ.ಶಂಕರ್, ವಿಕ್ರಮ್ ಗುಲಾಟಿ, ಉಪಾಧ್ಯಕ್ಷ ರಮೇಶ್ ರಾವ್, ಜನರಲ್ ಮ್ಯಾನೇಜರ್ ಎಚ್.ಜೆ.ಕಿರಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-358295073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಾಬಸ್ಪೇಟೆ– ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ₹1,200 ಕೋಟಿ ಹೂಡಿಕೆಯ ಮೂಲಕ ಜಾಗತಿಕ ಮಟ್ಟದ ‘ಬಿಝ್ಇಂಟೆಲ್’ ಹಬ್ ಸ್ಥಾಪಿಸಲಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯ ಸಿಒಒ ಮತ್ತು ವಿಶೇಷ ಯೋಜನೆಯ ನಿರ್ದೇಶಕ ಸುದೀಪ್ ದಳವಿ ಅವರು ಈ ಕುರಿತ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಹೂಡಿಕೆಗೆ ಸಹಕಾರ ನೀಡುತ್ತೇವೆ. ಈ ರೀತಿಯ ಘಟಕ ಸ್ಥಾಪನೆ ಆಗುತ್ತಿರುವುದು ವಿಶ್ವದಲ್ಲೇ ಇದೇ ಮೊದಲು ಎನ್ನುವ ವಿಷಯ ಕೇಳಿ ಸಂತಸವಾಯಿತು’ ಎಂದು ಹೇಳಿದರು.</p>.<p>ಸಚಿವ ಎಂ.ಬಿ.ಪಾಟೀಲ ಮಾತನಾಡಿ, ‘ಇದು ಕ್ವಿನ್ ಸಿಟಿಯಲ್ಲಿ ನಡೆಯುತ್ತಿರುವ ಪ್ರಥಮ ಹೂಡಿಕೆ. ಕಂಪನಿಯು ಐದು ವರ್ಷಗಳಲ್ಲಿ ₹1,200 ಕೋಟಿ ಆರಂಭಿಕವಾಗಿ ಬಂಡವಾಳ ಹೂಡಲಿದೆ. ಇದರಿಂದ 200 ಉದ್ಯೋಗ ಸೃಷ್ಟಿಆಗಲಿವೆ. ಇದಕ್ಕಾಗಿ ಅಲ್ಲಿ ಟೊಯೋಟಾ ಕಂಪನಿಗೆ 300 ಎಕರೆ ಭೂಮಿ ಒದಗಿಸಲಾಗುವುದು. ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆ, ಆಧುನಿಕ ವಾಹನ ತಯಾರಿಕಾ ಸ್ಥಾವರ ಆರಂಭ ಎಲ್ಲವೂ ನಡೆಯಲಿವೆ. ಇದು ರಾಜ್ಯದ ಯುವ ಜನರಿಗೆ ವರದಾನವಾಗಲಿದೆ’ ಎಂದರು.</p>.<p>‘ಕ್ವಿನ್ ಸಿಟಿಯಲ್ಲಿ ನಾವೀನ್ಯ, ಆರೋಗ್ಯ ಸೇವೆಗಳು ಮತ್ತು ಐಟಿ ತಂತ್ರಜ್ಞಾನಕ್ಕೆ ಆದ್ಯತೆ ಕೊಡಲಾಗುವುದು. ಇಲ್ಲಿ ಹೂಡಿಕೆ ಮಾಡಲು ಜಾಗತಿಕ ಮಟ್ಟದ ಏಳೆಂಟು ವಿಶ್ವವಿದ್ಯಾಲಯಗಳು, ಆರೋಗ್ಯ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು ಈಗಾಗಲೇ ಮುಂದೆ ಬಂದಿವೆ. ಅವುಗಳೊಂದಿಗೂ ಆದಷ್ಟು ತ್ವರಿತವಾಗಿ ಒಡಂಬಡಿಕೆಗೆ ಅಂತಿಮರೂಪ ನೀಡಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ ಎಂದರು.</p>.<p>ಈ ಅತ್ಯಾಧುನಿಕ ನಗರವು ಒಟ್ಟು 5,800 ಎಕರೆಯಲ್ಲಿ ಹಂತಹಂತವಾಗಿ ಅಸ್ತಿತ್ವಕ್ಕೆ ಬರಲಿದೆ. ಈಗಾಗಲೇ ಮೊದಲ ಹಂತದ ಅಭಿವೃದ್ಧಿ ಪ್ರಗತಿಯಲ್ಲಿದೆ. ಈ ಯೋಜನೆಗೆ ಒಟ್ಟು ₹48 ಸಾವಿರ ಕೋಟಿ ಹೂಡಿಕೆ ಆಗಲಿದೆ. ಒಟ್ಟಾರೆ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಪಾಟೀಲ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಇಲಾಖೆ ಆಯುಕ್ತೆ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೋಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ, ಉನ್ನತ ಮಟ್ಟದ ಪ್ರತಿನಿಧಿಗಳಾದ ಜಿ.ಶಂಕರ್, ವಿಕ್ರಮ್ ಗುಲಾಟಿ, ಉಪಾಧ್ಯಕ್ಷ ರಮೇಶ್ ರಾವ್, ಜನರಲ್ ಮ್ಯಾನೇಜರ್ ಎಚ್.ಜೆ.ಕಿರಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-358295073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>