ಬೆಳಗ್ಗೆ ಮೈಸೂರು–ಬೆಂಗಳೂರು ಹೆದ್ದಾರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟ ನೂರಾರು ಕಾರ್ಮಿಕರು ಒಬ್ಬರಿಗೊಬ್ಬರು ಕೈ ಹಿಡಿದು ಕಾಡುಮನೆ ಪ್ರದೇಶದಿಂದ ಕಾರ್ಖಾನೆವರೆಗೂ ಸುಮಾರು ಐದಾರು ಕಿಲೋಮೀಟರ್ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಚ್ಎಎಲ್ ನೌಕರರ ಸಂಘದ ಪದಾಧಿಕಾರಿಗಳು ಟೊಯೊಟಾ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.