ಕೆ.ಆರ್.ಪುರಂ ಲೂಪ್ ಮುಖ್ಯ ಟ್ರ್ಯಾಕ್ ಬಳಿ ಸೇರುವ ಎರಡು ಸ್ಪ್ಯಾನ್ಗಳನ್ನು ಕಿತ್ತು ಹಾಕಲಾಗಿದೆ. ಇದರಿಂದ ಕೆಆರ್ ಪುರಂ ಲೂಪ್ನಲ್ಲಿ ಮುಂದಿನ ನಾಲ್ಕು ತಿಂಗಳವರೆಗೆ ನಗರದ ಕಡೆಗೆ ಸಂಚಾರ ನಿಧಾನವಾಗಿರಲಿದೆ. ಕೆ.ಆರ್. ಪುರಂ ಕಡೆಯಿಂದ ನಗರದ ಕಡೆಗೆ ಬರುವ ಪ್ರಯಾಣಿಕರು ಪರ್ಯಾಯ ಮಾರ್ಗಗಳಾದ ಐಒಸಿ– ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರಂ ಮೇಲ್ಸೇತುವೆ ಮಾರ್ಗ, ನಾಗವಾರ–ಟ್ಯಾನರಿ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಬಹುದು. ಹೆಗಡೆನಗರ ಥಣಿಸಂದ್ರ ಕಡೆಯಿಂದ ಬರುವ ಜನರು ಜಿಕೆವಿಕೆ ಜಕ್ಕೂರು ರಸ್ತೆಯ ಮೂಲಕ ನಗರ ಪ್ರವೇಶಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.