ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದ ಬಿಸಿ ನಗರಕ್ಕೆ ತಟ್ಟಿಲ್ಲ. ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿವೆ. ಶಾಲಾ- ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ಎಲ್ಲ ಕಡೆ ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿವೆ. ಜನ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ.