ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಕಾನೂನು ಸಡಿಲವಾದರೆ ಆರ್ಥಿಕ ಕುಸಿತ: ಕಾರ್ಮಿಕ ಸಂಘಟನೆಗಳ ಆತಂಕ

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆತಂಕ
Last Updated 22 ಮೇ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಯಾವುದೇ ಕಾರಣಕ್ಕೂ ಕಾರ್ಮಿಕ ಕಾನೂನುಗಳನ್ನು ಸಡಿಲಗೊಳಿಸಬಾರದು. ಹೀಗೆ ಮಾಡುವುದರಿಂದ ಈಗಾಗಲೇ ಇರುವ ಕೈಗಾರಿಕೆಗಳಿಗೆ ಮತ್ತು ಕಾರ್ಮಿಕರಿಗೆ ತೊಂದರೆಯಾಗುತ್ತದೆ. ರಾಜ್ಯವೂ ಆರ್ಥಿಕ ಕುಸಿತಕ್ಕೆ ಒಳಗಾಗುತ್ತದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹೇಳಿದೆ.

ಸಮಿತಿಯ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿತು.

‘ಅಸಂಘಟಿತ ಕಾರ್ಮಿಕರಿಗೆ ಘೋಷಿಸಿರುವ ₹5 ಸಾವಿರ ನೆರವನ್ನು ಕೂಡಲೇ ನೀಡಬೇಕು. ವಿಳಂಬ ಮಾಡಬಾರದು’ ಎಂದೂನಿಯೋಗ ಮನವಿ ಮಾಡಿತು.

‘ಕೆಲಸದ ಅವಧಿಯನ್ನು ಹೆಚ್ಚಿಸುವುದು, ಕಾರ್ಮಿಕರ ಗುತ್ತಿಗೆ ಪ್ರಮಾಣ ಜಾಸ್ತಿ ಮಾಡುವುದು ಸೇರಿದಂತೆ ಮಾಲೀಕರ ಒತ್ತಡಕ್ಕೆ ಮಣಿದು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿದೆ. ಇಂತಹ ಕ್ರಮಗಳನ್ನು ಕೈಬಿಡಬೇಕು’ ಎಂದು ನಿಯೋಗ ಮನವಿ ಮಾಡಿತು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರಾದ ಶಾಮಣ್ಣ ರೆಡ್ಡಿ, ವಿಜಯಭಾಸ್ಕರ್, ಎಸ್. ವರಲಕ್ಷ್ಮಿ, ಮೀನಾಕ್ಷಿ ಸುಂದರಂ, ಮೈಕಲ್‌ ಫರ್ನಾಂಡಿಸ್, ಕೆ.ವಿ. ಭಟ್, ಎನ್.ಪಿ. ಸ್ವಾಮಿ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT