<p><strong>ಬೆಂಗಳೂರು</strong>: ‘ಯಾವುದೇ ಕಾರಣಕ್ಕೂ ಕಾರ್ಮಿಕ ಕಾನೂನುಗಳನ್ನು ಸಡಿಲಗೊಳಿಸಬಾರದು. ಹೀಗೆ ಮಾಡುವುದರಿಂದ ಈಗಾಗಲೇ ಇರುವ ಕೈಗಾರಿಕೆಗಳಿಗೆ ಮತ್ತು ಕಾರ್ಮಿಕರಿಗೆ ತೊಂದರೆಯಾಗುತ್ತದೆ. ರಾಜ್ಯವೂ ಆರ್ಥಿಕ ಕುಸಿತಕ್ಕೆ ಒಳಗಾಗುತ್ತದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹೇಳಿದೆ.</p>.<p>ಸಮಿತಿಯ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿತು.</p>.<p>‘ಅಸಂಘಟಿತ ಕಾರ್ಮಿಕರಿಗೆ ಘೋಷಿಸಿರುವ ₹5 ಸಾವಿರ ನೆರವನ್ನು ಕೂಡಲೇ ನೀಡಬೇಕು. ವಿಳಂಬ ಮಾಡಬಾರದು’ ಎಂದೂನಿಯೋಗ ಮನವಿ ಮಾಡಿತು.</p>.<p>‘ಕೆಲಸದ ಅವಧಿಯನ್ನು ಹೆಚ್ಚಿಸುವುದು, ಕಾರ್ಮಿಕರ ಗುತ್ತಿಗೆ ಪ್ರಮಾಣ ಜಾಸ್ತಿ ಮಾಡುವುದು ಸೇರಿದಂತೆ ಮಾಲೀಕರ ಒತ್ತಡಕ್ಕೆ ಮಣಿದು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿದೆ. ಇಂತಹ ಕ್ರಮಗಳನ್ನು ಕೈಬಿಡಬೇಕು’ ಎಂದು ನಿಯೋಗ ಮನವಿ ಮಾಡಿತು.</p>.<p>ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರಾದ ಶಾಮಣ್ಣ ರೆಡ್ಡಿ, ವಿಜಯಭಾಸ್ಕರ್, ಎಸ್. ವರಲಕ್ಷ್ಮಿ, ಮೀನಾಕ್ಷಿ ಸುಂದರಂ, ಮೈಕಲ್ ಫರ್ನಾಂಡಿಸ್, ಕೆ.ವಿ. ಭಟ್, ಎನ್.ಪಿ. ಸ್ವಾಮಿ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಯಾವುದೇ ಕಾರಣಕ್ಕೂ ಕಾರ್ಮಿಕ ಕಾನೂನುಗಳನ್ನು ಸಡಿಲಗೊಳಿಸಬಾರದು. ಹೀಗೆ ಮಾಡುವುದರಿಂದ ಈಗಾಗಲೇ ಇರುವ ಕೈಗಾರಿಕೆಗಳಿಗೆ ಮತ್ತು ಕಾರ್ಮಿಕರಿಗೆ ತೊಂದರೆಯಾಗುತ್ತದೆ. ರಾಜ್ಯವೂ ಆರ್ಥಿಕ ಕುಸಿತಕ್ಕೆ ಒಳಗಾಗುತ್ತದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹೇಳಿದೆ.</p>.<p>ಸಮಿತಿಯ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿತು.</p>.<p>‘ಅಸಂಘಟಿತ ಕಾರ್ಮಿಕರಿಗೆ ಘೋಷಿಸಿರುವ ₹5 ಸಾವಿರ ನೆರವನ್ನು ಕೂಡಲೇ ನೀಡಬೇಕು. ವಿಳಂಬ ಮಾಡಬಾರದು’ ಎಂದೂನಿಯೋಗ ಮನವಿ ಮಾಡಿತು.</p>.<p>‘ಕೆಲಸದ ಅವಧಿಯನ್ನು ಹೆಚ್ಚಿಸುವುದು, ಕಾರ್ಮಿಕರ ಗುತ್ತಿಗೆ ಪ್ರಮಾಣ ಜಾಸ್ತಿ ಮಾಡುವುದು ಸೇರಿದಂತೆ ಮಾಲೀಕರ ಒತ್ತಡಕ್ಕೆ ಮಣಿದು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿದೆ. ಇಂತಹ ಕ್ರಮಗಳನ್ನು ಕೈಬಿಡಬೇಕು’ ಎಂದು ನಿಯೋಗ ಮನವಿ ಮಾಡಿತು.</p>.<p>ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರಾದ ಶಾಮಣ್ಣ ರೆಡ್ಡಿ, ವಿಜಯಭಾಸ್ಕರ್, ಎಸ್. ವರಲಕ್ಷ್ಮಿ, ಮೀನಾಕ್ಷಿ ಸುಂದರಂ, ಮೈಕಲ್ ಫರ್ನಾಂಡಿಸ್, ಕೆ.ವಿ. ಭಟ್, ಎನ್.ಪಿ. ಸ್ವಾಮಿ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>