<p><strong>ಬೆಂಗಳೂರು:</strong> ‘ಸಮಾಜದ ಅಂಚಿನ ಸಮುದಾಯಗಳು ಅವನತಿಯ ಹಾದಿಯಲ್ಲಿವೆ. ಅವುಗಳ ಕುಲಕಸುಬುಗಳು ಮತ್ತು ಪಾರಂಪರಿಕ ಕಲೆಗಳು ಕಣ್ಮರೆಯಾಗುತ್ತಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದರು.</p>.<p>ನಗರದ ರಾಜಾಜಿನಗರದ ಶಿವಶಕ್ತಿ ನೃತ್ಯ ಶಾಲೆಯ ರಜತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈಚಿನ ದಶಕಗಳಲ್ಲಿ ಜಗತ್ತಿನಾದ್ಯಂತ ಸಾವಿರಾರು ಸಣ್ಣ– ಪುಟ್ಟ ಭಾಷೆಗಳು ಸಂಪೂರ್ಣವಾಗಿ ಇಲ್ಲವಾಗಿವೆ. ಭಾಷೆಗಳ ಜತೆಗೆ ಆ ಜನ ಸಮುದಾಯಗಳ ಪಾರಂಪರಿಕ ಕಲೆಗಳೂ ನಶಿಸಿಹೋಗುತ್ತವೆ. ಮುಂದಿನ ಐವತ್ತು ವರ್ಷಗಳಲ್ಲಿ ಜಗತ್ತಿನ ಎಲ್ಲ ಜನರ ಮೇಲೆ ಕೆಲವೇ ಭಾಷೆಗಳು ಅಧಿಪತ್ಯ ಸಾಧಿಸುವ ಅಪಾಯವಿದೆ’ ಎಂದರು.</p>.<p>‘ಈ ಅಪಾಯಗಳಿಂದ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಗಳನ್ನು ರಕ್ಷಿಸಲು ಪರಿಣಾಮಕಾರಿ ಪ್ರಯತ್ನ ಅಗತ್ಯ. ಆ ಯತ್ನದ ಭಾಗವಾಗಿ ಸಂಗೀತ, ನೃತ್ಯ, ನಾಟಕ, ಯಕ್ಷಗಾನ ಮುಂತಾದ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮಾಜದ ಅಂಚಿನ ಸಮುದಾಯಗಳು ಅವನತಿಯ ಹಾದಿಯಲ್ಲಿವೆ. ಅವುಗಳ ಕುಲಕಸುಬುಗಳು ಮತ್ತು ಪಾರಂಪರಿಕ ಕಲೆಗಳು ಕಣ್ಮರೆಯಾಗುತ್ತಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದರು.</p>.<p>ನಗರದ ರಾಜಾಜಿನಗರದ ಶಿವಶಕ್ತಿ ನೃತ್ಯ ಶಾಲೆಯ ರಜತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈಚಿನ ದಶಕಗಳಲ್ಲಿ ಜಗತ್ತಿನಾದ್ಯಂತ ಸಾವಿರಾರು ಸಣ್ಣ– ಪುಟ್ಟ ಭಾಷೆಗಳು ಸಂಪೂರ್ಣವಾಗಿ ಇಲ್ಲವಾಗಿವೆ. ಭಾಷೆಗಳ ಜತೆಗೆ ಆ ಜನ ಸಮುದಾಯಗಳ ಪಾರಂಪರಿಕ ಕಲೆಗಳೂ ನಶಿಸಿಹೋಗುತ್ತವೆ. ಮುಂದಿನ ಐವತ್ತು ವರ್ಷಗಳಲ್ಲಿ ಜಗತ್ತಿನ ಎಲ್ಲ ಜನರ ಮೇಲೆ ಕೆಲವೇ ಭಾಷೆಗಳು ಅಧಿಪತ್ಯ ಸಾಧಿಸುವ ಅಪಾಯವಿದೆ’ ಎಂದರು.</p>.<p>‘ಈ ಅಪಾಯಗಳಿಂದ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಗಳನ್ನು ರಕ್ಷಿಸಲು ಪರಿಣಾಮಕಾರಿ ಪ್ರಯತ್ನ ಅಗತ್ಯ. ಆ ಯತ್ನದ ಭಾಗವಾಗಿ ಸಂಗೀತ, ನೃತ್ಯ, ನಾಟಕ, ಯಕ್ಷಗಾನ ಮುಂತಾದ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>