ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಆಟೋ ಗುದ್ದಿ ಸಂಚಾರ ಠಾಣೆ ಎಎಸ್‌ಐ ಸಾವು

Last Updated 1 ಮಾರ್ಚ್ 2023, 5:11 IST
ಅಕ್ಷರ ಗಾತ್ರ

ಬೆಂಗಳೂರು: ಬಸವೇಶ್ವರ ವೃತ್ತದಲ್ಲಿ (ಚಾಲುಕ್ಯ) ಕರ್ತವ್ಯದಲ್ಲಿದ್ದ ವೇಳೆ ಆಟೊವೊಂದು ಗುದ್ದಿ ಗಾಯಗೊಂಡಿದ್ದ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ (ಎಎಸ್‌ಐ) ನಾಗರಾಜ್ (56) ಅವರು ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

‘ಹೈಗ್ರೌಂಡ್ಸ್ ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಅವರನ್ನು ಫೆ. 26ರಂದು ಬಸವೇಶ್ವರ ವೃತ್ತದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಶಿವಕುಮಾರ್ ಎಂಬಾತ ಚಲಾಯಿಸುತ್ತಿದ್ದ ಆಟೊ, ನಾಗರಾಜ್ ಅವರಿಗೆ ಗುದ್ದಿತ್ತು. 6 ಅಡಿಯಷ್ಟು ಮೇಲಕ್ಕೆ ಹಾರಿ ಬಿದ್ದಿದ್ದ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ತಲೆಗೆ ಪೆಟ್ಟಾಗಿದ್ದರಿಂದ ರಕ್ತ ಹೆಪ್ಪುಗಟ್ಟಿತ್ತು. ಅವರ ಮಿದುಳು ಸಹ ನಿಷ್ಕ್ರಿಯಗೊಂಡಿತ್ತು. ನಾಗರಾಜ್ ಅವರ ಅಂಗಾಂಗ ದಾನದ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ. ಆದರೆ, ಕುಟುಂಬದವರು ಈ ಬಗ್ಗೆ ಯಾವುದೇ ನಿರ್ಧಾರ ತಿಳಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT