ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ‘ಪ್ರಜಾವಾಣಿ’ ಜತೆ ಮಾತನಾಡಿ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುವುದು ನಮ್ಮ ಉದ್ದೇಶ. ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿಯುವ ಜ್ಞಾನವು ಸೀಮಿತವಾದುದು. ದೈನಂದಿನ ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ರಸ್ತೆ ಸುರಕ್ಷತೆ ಕಲಿಸುವುದು ಅಗತ್ಯ. ವಾಹನ ಚಲಾಯಿಸುವ ಚಾಲಕರು ಮಾತ್ರವಲ್ಲ, ಪಾದಚಾರಿಗಳು ಮತ್ತು ಪ್ರಯಾಣಿಕರಿಗೂ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಅಗತ್ಯ ಎಂದರು.