<p><strong>ಬೆಂಗಳೂರು:</strong> ಸಂಚಾರ ಪೊಲೀಸ್ ಇಲಾಖೆಯ ಪಶ್ಚಿಮ ವಿಭಾಗದ ವತಿಯಿಂದ ಮಾಗಡಿ ಮುಖ್ಯರಸ್ತೆಯ ಕೊಟ್ಟಿಗೆಪಾಳ್ಯದ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಅಧ್ಯಕ್ಷತೆಯಲ್ಲಿ ಸಂಚಾರ ಸಂಪರ್ಕ ದಿನ ನಡೆಯಿತು.</p>.<p>ಸಭೆಯಲ್ಲಿ ವಿವಿಧ ಬಡಾವಣೆಯ ನಿವಾಸಿಗಳು ಪಾಲ್ಗೊಂಡು ತಮ್ಮ ಭಾಗದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದರು.</p>.<p>ಸಂಚಾರ ದಟ್ಟಣೆ, ಪಾದಚಾರಿ ಮಾರ್ಗಗಳ ಒತ್ತುವರಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವಿಕೆ, ಏಕಮುಖ ಮಾರ್ಗದಲ್ಲಿ ವಾಹನಗಳ ಸಂಚಾರ, ಅತಿವೇಗದ ಚಾಲನೆ, ವ್ಹೀಲಿ ಸೇರಿ ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಸಾರ್ವಜನಿಕರು ಗಮನ ಸೆಳೆದರು.</p>.<p>ಕೊಟ್ಟಿಗೆಪಾಳ್ಯದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವುದಕ್ಕೆ ಜನರಿಗೆ ತೀವ್ರ ಸಮಸ್ಯೆ ಆಗುತ್ತಿದೆ. ಅದನ್ನು ಬಗೆಹರಿಸಿ. ಸುಮನಹಳ್ಳಿ ಬಳಿಯಿರುವ ಸ್ಕೈವಾಕ್ ಅನ್ನು ಯಾರೂ ಬಳಸುತ್ತಿಲ್ಲ. ಅದನ್ನು ಕೊಟ್ಟಿಗೆಪಾಳ್ಯಕ್ಕೆ ಸ್ಥಳಾಂತರ ಮಾಡಿದರೆ ಅನುಕೂಲ ಆಗಲಿದೆ ಎಂದು ಸ್ಥಳೀಯ ನಿವಾಸಿ ಗಿರೀಶ್ ಕುಮಾರ್ ಕೋರಿದರು.</p>.<p>ಇದರ ಜತೆಗೆ ಸಿಗ್ನಲ್ ಸಮಸ್ಯೆ, ಬಿಎಂಟಿಸಿ ಬಸ್ ನಿಲುಗಡೆ ವಿಚಾರಗಳೂ ಸಭೆಯಲ್ಲಿ ಚರ್ಚೆ ನಡೆದವು. ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಚಾರ ಪೊಲೀಸ್ ಇಲಾಖೆಯ ಪಶ್ಚಿಮ ವಿಭಾಗದ ವತಿಯಿಂದ ಮಾಗಡಿ ಮುಖ್ಯರಸ್ತೆಯ ಕೊಟ್ಟಿಗೆಪಾಳ್ಯದ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಅಧ್ಯಕ್ಷತೆಯಲ್ಲಿ ಸಂಚಾರ ಸಂಪರ್ಕ ದಿನ ನಡೆಯಿತು.</p>.<p>ಸಭೆಯಲ್ಲಿ ವಿವಿಧ ಬಡಾವಣೆಯ ನಿವಾಸಿಗಳು ಪಾಲ್ಗೊಂಡು ತಮ್ಮ ಭಾಗದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದರು.</p>.<p>ಸಂಚಾರ ದಟ್ಟಣೆ, ಪಾದಚಾರಿ ಮಾರ್ಗಗಳ ಒತ್ತುವರಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವಿಕೆ, ಏಕಮುಖ ಮಾರ್ಗದಲ್ಲಿ ವಾಹನಗಳ ಸಂಚಾರ, ಅತಿವೇಗದ ಚಾಲನೆ, ವ್ಹೀಲಿ ಸೇರಿ ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಸಾರ್ವಜನಿಕರು ಗಮನ ಸೆಳೆದರು.</p>.<p>ಕೊಟ್ಟಿಗೆಪಾಳ್ಯದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವುದಕ್ಕೆ ಜನರಿಗೆ ತೀವ್ರ ಸಮಸ್ಯೆ ಆಗುತ್ತಿದೆ. ಅದನ್ನು ಬಗೆಹರಿಸಿ. ಸುಮನಹಳ್ಳಿ ಬಳಿಯಿರುವ ಸ್ಕೈವಾಕ್ ಅನ್ನು ಯಾರೂ ಬಳಸುತ್ತಿಲ್ಲ. ಅದನ್ನು ಕೊಟ್ಟಿಗೆಪಾಳ್ಯಕ್ಕೆ ಸ್ಥಳಾಂತರ ಮಾಡಿದರೆ ಅನುಕೂಲ ಆಗಲಿದೆ ಎಂದು ಸ್ಥಳೀಯ ನಿವಾಸಿ ಗಿರೀಶ್ ಕುಮಾರ್ ಕೋರಿದರು.</p>.<p>ಇದರ ಜತೆಗೆ ಸಿಗ್ನಲ್ ಸಮಸ್ಯೆ, ಬಿಎಂಟಿಸಿ ಬಸ್ ನಿಲುಗಡೆ ವಿಚಾರಗಳೂ ಸಭೆಯಲ್ಲಿ ಚರ್ಚೆ ನಡೆದವು. ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>