‘ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಂದ ದಂಡ ವಸೂಲಿ ಮಾಡಲು ಆನ್ಲೈನ್ ವ್ಯವಸ್ಥೆ ರೂಪಿಸಲಾಗಿತ್ತು. ಇದೀಗ, ಈ ವ್ಯವಸ್ಥೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಯ ಜನರು, ಈ ವ್ಯವಸ್ಥೆ ಬಳಸಿಕೊಂಡು ಬಾಕಿ ದಂಡ ಪಾವತಿಸಬೇಕು’ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ಕುಮಾರ್ ತಿಳಿಸಿದ್ದಾರೆ.