ವಾಹನಗಳನ್ನು ತಡೆದು ನಿಲ್ಲಿಸಿದ್ದ ಯಮ ಮತ್ತು ಚಿತ್ರಗುಪ್ತ ವೇಷಧಾರಿ, ಪ್ರತಿಯೊಬ್ಬರಿಗೂ ಗುಲಾಬಿ ಹೂವು ನೀಡಿ ನಿಯಮ ಪಾಲಿಸುವಂತೆ ಮನವಿ ಮಾಡಿದರು. ಹೆಲ್ಮೆಟ್ ಧರಿಸದ ಹಾಗೂ ಮೊಬೈಲ್ನಲ್ಲಿ ಮಾತನಾಡಿಕೊಂಡು ಬೈಕ್ ಓಡಿಸುತ್ತಿದ್ದ ಸವಾರರನ್ನು ಬೆನ್ನಟ್ಟಿ ಹಿಡಿದರು. ರಸ್ತೆಯಲ್ಲೇ ಅವರಿಗೆ ಸಂಚಾರ ನಿಯಮಗಳ ಪಾಠ ಮಾಡಿದರು. ‘ತಲೆ ಹುಷಾರು... ಇಲ್ಲದಿದ್ದರೆ ನನ್ನ ಲೋಕಕ್ಕೆ ಬರುತ್ತಿಯಾ’ ಎಂದು ಹಾಸ್ಯವಾಗಿ ಹೇಳಿ ಗುಲಾಬಿ ಹೂವು ಕೊಟ್ಟು ಬೀಳ್ಕೊಟ್ಟರು.