ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗಮ ಸಂಚಾರ: ಐಐಎಸ್ಸಿ–ಪೊಲೀಸರ ನಡುವೆ ಒಪ್ಪಂದ

Published 15 ಡಿಸೆಂಬರ್ 2023, 20:27 IST
Last Updated 15 ಡಿಸೆಂಬರ್ 2023, 20:27 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ದಟ್ಟಣೆ ತಗ್ಗಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಜೊತೆಗೆ ಸಂಚಾರ ಪೊಲೀಸರು ಒಪ್ಪಂದ ಮಾಡಿಕೊಂಡಿದ್ದಾರೆ.

ಹೆಚ್ಚುತ್ತಿರುವ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ತರಬೇತಿ ಹಾಗೂ ಸಂಚಾರ ವ್ಯವಸ್ಥೆಯ ಬಲವರ್ಧನೆಗೆ ಸಂಬಂಧಪಟ್ಟ ಒಪ್ಪಂದ ಇದಾಗಿದೆ. ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ಅವರು ಐಐಎಸ್ಸಿ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ಒಪ್ಪಂದಕ್ಕೆ ಸಹಿ ಹಾಕಿದರು.

ಎಂ.ಎನ್. ಅನುಚೇತ್ ಮಾತನಾಡಿ, ‘ಸಂಚಾರ ಸಂಬಂಧಿತ ದತ್ತಾಂಶವನ್ನು ವಿಶ್ಲೇಷಿಸಿ ದಟ್ಟಣೆಗೆ ಪರಿಹಾರ ಒದಗಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಐಐಎಸ್ಸಿ ಸಲಹೆ ನೀಡಲಿದೆ. ಸಂಚಾರ ಸಿಬ್ಬಂದಿಗೆ ತರಬೇತಿ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆಯೂ ಜ್ಞಾನ ಒದಗಿಸಲಿದೆ’ ಎಂದರು.

ಐಐಎಸ್ಸಿಯ ಪ್ರೊ. ಅಬ್ದುಲ್ ರವೂಪ್ ಪಿಂಜಾರಿ, ‘ಸುಗಮ ಸಂಚಾರಕ್ಕೆ ಅಗತ್ಯವಿರುವ ಯೋಜನೆಗಳನ್ನು ಸಿದ್ಧಪಡಿಸಿ ನೀಡಲು ನಮ್ಮ ಸಂಸ್ಥೆ ಸಹಕರಿಸಲಿದೆ’ ಎಂದರು.

ಡಿಸಿಪಿ ಕುಲದೀಪ್ ಕುಮಾರ್ ಜೈನ್, ಐಐಎಸ್ಸಿಯ ಪ್ರೊ. ವಿಜಯ್ ಕೋವಳ್ಳಿ, ಡಾ ರಘುಕೃಷ್ಣಪುರಂ ಹಾಗೂ ರಕ್ಷಿತ್ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT