‘ವಿಜಯನಗರದ ಮಾರೇನಹಳ್ಳಿ ಜಂಕ್ಷನ್ನಲ್ಲಿ ಜುಲೈ 3ರಂದು ಕರ್ತವ್ಯದಲ್ಲಿದ್ದ ಸಿಬ್ಬಂದಿ, ಸಂಚಾರ ನಿಯಮ ಉಲ್ಲಂಘಿಸುವವರನ್ನು ತಡೆದು ದಂಡ ವಿಧಿಸುತ್ತಿದ್ದರು. ಅದೇ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನದ (ಕೆಎ 02 ಜೆ 938) ಸವಾರ, ತನ್ನನ್ನು ತಡೆಯಲು ಬಂದ ಕಾನ್ಸ್ಟೆಬಲ್ ಹರೀಶ್ ಅವರನ್ನು ತಳ್ಳಿ ಪರಾರಿಯಾಗಲು ಯತ್ನಿಸಿದ್ದ. ಸಿಬ್ಬಂದಿ ಬೆನ್ನಟ್ಟಿದಾಗ, ರಸ್ತೆಯಲ್ಲಿ ವಾಹನ ಬಿಟ್ಟು ಓಡಿಹೋಗಿದ್ದ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹೇಳಿದರು.