‘ಮಹಾರಾಷ್ಟ್ರದ ಸಂಜಯ್, ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು. ಆಗಸ್ಟ್ 16ರಂದು ಮಾರತ್ತಹಳ್ಳಿ ಮೇಲ್ಸೇತುವೆ ಸಮೀಪ ನಡೆದುಕೊಂಡು ಹೊರಟಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿತ್ತು. ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞೆ ಹೋಗಿತ್ತು. ಎಚ್ಎಎಲ್ ಸಂಚಾರ ಪೊಲೀಸರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ಪೂರ್ವ ವಿಭಾಗದ (ಸಂಚಾರ) ಡಿಸಿಪಿ ನಾರಾಯಣ್ ತಿಳಿಸಿದರು.