<p><strong>ಬೆಂಗಳೂರು:</strong> ಹೊರವರ್ತುಲ ರಸ್ತೆಯಲ್ಲಿದ್ದ ಗುಂಡಿಗಳನ್ನು ಸಂಚಾರ ಪೊಲೀಸರು ಮುಚ್ಚಿದ್ದು, ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ವಾಹನಗಳು ಸಹ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿಂದ ದಟ್ಟಣೆಯೂ ಉಂಟಾಗುತ್ತಿತ್ತು.</p>.<p>ಸುಗಮ ಸಂಚಾರಕ್ಕೆ ರಸ್ತೆ ಗುಂಡಿಗಳು ಅಡ್ಡಿಯಾಗಿದ್ದನ್ನು ಗಮನಿಸಿದ್ದ ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸರು, ತಾವೇ ಸಲಿಕೆ ಹಿಡಿದು ಸಿಮೆಂಟ್ ಮಿಶ್ರಿತ ಜಲ್ಲಿ ಕಲ್ಲುಗಳಿಂದ ಗುಂಡಿ ಮುಚ್ಚಿದ್ದಾರೆ.</p>.<p>‘27ನೇ ಮುಖ್ಯರಸ್ತೆ ಹಾಗೂ ಅಗರ ಕೆಳ ಸೇತುವೆ ರಸ್ತೆಯಲ್ಲಿ ರಸ್ತೆ ಗುಂಡಿಗಳಿಂದ ಕೂಡಿತ್ತು. ರಸ್ತೆ ನಿರ್ವಹಣೆ ಅಧಿಕಾರಿಗಳಿಗೆ ದೂರು ನೀಡಿದರೂ ದುರಸ್ತಿ ಮಾಡಿರಲಿಲ್ಲ. ಹೀಗಾಗಿ, ಸಂಚಾರ ಪೊಲೀಸರೇ ಗುಂಡಿಗಳನ್ನು ಮುಚ್ಚಿದ್ದಾರೆ’ ಎಂದು ಸ್ಥಳೀಯರೊಬ್ಬರು ಹೇಳಿದರು.</p>.<p>ಪೊಲೀಸರು ರಸ್ತೆ ಗುಂಡಿ ಮುಚ್ಚಿರುವ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಪೋಟೊ ಹಂಚಿಕೊಂಡಿರುವ ಸಾರ್ವಜನಿಕರು, ‘ಬಿಬಿಎಂಪಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮಾಡದ ಕೆಲಸವನ್ನು ಪೊಲೀಸರು ಮಾಡಿದ್ದಾರೆ’ ಎಂದು ಹೊಗಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊರವರ್ತುಲ ರಸ್ತೆಯಲ್ಲಿದ್ದ ಗುಂಡಿಗಳನ್ನು ಸಂಚಾರ ಪೊಲೀಸರು ಮುಚ್ಚಿದ್ದು, ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ವಾಹನಗಳು ಸಹ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿಂದ ದಟ್ಟಣೆಯೂ ಉಂಟಾಗುತ್ತಿತ್ತು.</p>.<p>ಸುಗಮ ಸಂಚಾರಕ್ಕೆ ರಸ್ತೆ ಗುಂಡಿಗಳು ಅಡ್ಡಿಯಾಗಿದ್ದನ್ನು ಗಮನಿಸಿದ್ದ ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸರು, ತಾವೇ ಸಲಿಕೆ ಹಿಡಿದು ಸಿಮೆಂಟ್ ಮಿಶ್ರಿತ ಜಲ್ಲಿ ಕಲ್ಲುಗಳಿಂದ ಗುಂಡಿ ಮುಚ್ಚಿದ್ದಾರೆ.</p>.<p>‘27ನೇ ಮುಖ್ಯರಸ್ತೆ ಹಾಗೂ ಅಗರ ಕೆಳ ಸೇತುವೆ ರಸ್ತೆಯಲ್ಲಿ ರಸ್ತೆ ಗುಂಡಿಗಳಿಂದ ಕೂಡಿತ್ತು. ರಸ್ತೆ ನಿರ್ವಹಣೆ ಅಧಿಕಾರಿಗಳಿಗೆ ದೂರು ನೀಡಿದರೂ ದುರಸ್ತಿ ಮಾಡಿರಲಿಲ್ಲ. ಹೀಗಾಗಿ, ಸಂಚಾರ ಪೊಲೀಸರೇ ಗುಂಡಿಗಳನ್ನು ಮುಚ್ಚಿದ್ದಾರೆ’ ಎಂದು ಸ್ಥಳೀಯರೊಬ್ಬರು ಹೇಳಿದರು.</p>.<p>ಪೊಲೀಸರು ರಸ್ತೆ ಗುಂಡಿ ಮುಚ್ಚಿರುವ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಪೋಟೊ ಹಂಚಿಕೊಂಡಿರುವ ಸಾರ್ವಜನಿಕರು, ‘ಬಿಬಿಎಂಪಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮಾಡದ ಕೆಲಸವನ್ನು ಪೊಲೀಸರು ಮಾಡಿದ್ದಾರೆ’ ಎಂದು ಹೊಗಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>