ಕಳೆದ ಐದು ವರ್ಷಗಳಿಂದ ದರ ಏರಿಕೆ ಮಾಡಿಲ್ಲ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದು, ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ. ಈ ವಿಚಾರ ಎಲ್ಲರಿಗೂ ಗೊತ್ತಾಗಬೇಕಿದೆ. ವಿರೋಧ ಪಕ್ಷಗಳಿಗೂ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗುವುದು. ಅಗತ್ಯವಿದ್ದರೆ ಈ ಬಗ್ಗೆ ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲೇ ಚರ್ಚಿಸಲಿ ಎಂದು ಹೇಳಿದರು.