<p><strong>ಬೆಂಗಳೂರು: </strong>ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಪಾವತಿಸಬೇಕಿರುವ ₹1.40 ಕೋಟಿಗೂ ಹೆಚ್ಚು ದಂಡದ ಮೊತ್ತವನ್ನು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಾಕಿ ಉಳಿಸಿಕೊಂಡಿವೆ. ಈ ಮೊತ್ತ ಪಾವತಿಸುವಂತೆ ಎರಡು ಸಂಸ್ಥೆಗಳಿಗೆ ಸಂಚಾರ ಪೊಲೀಸರು ಪತ್ರ ಬರೆದಿದ್ದಾರೆ.</p>.<p>ಸಂಚಾರ ವಿಭಾಗದ ವಿಶೇಷ ಕಮಿಷನರ್ ಡಾ.ಎಂ.ಎ.ಸಲೀಂ ಅವರು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.</p>.<p>ಬಸ್ ಚಾಲಕರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅದರಲ್ಲೂ ಬಿಎಂಟಿಸಿ ಚಾಲಕರು ಎಲ್ಲೆಂದಲ್ಲಿ ಬಸ್ಗಳನ್ನು ನಿಲ್ಲಿಸುವುದು ದಟ್ಟಣೆಗೆ ಕಾರಣವಾಗುತ್ತಿದೆ. ದಂಡ ವಿಧಿಸುತ್ತಿದ್ದರೂ ಈ ಪ್ರವೃತ್ತಿ ಕಡಿಮೆಯಾಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಬಿಎಂಟಿಸಿ ಒಂದರಿಂದಲೇ ₹1.30 ಕೋಟಿಗೂ ಹೆಚ್ಚು ದಂಡ ಬರಬೇಕಿದೆ. ಚಾಲಕರಿಗೆ ಎಚ್ಚರಿಕೆ ನೀಡಿ ದಟ್ಟಣೆ ಕಡಿಮೆ ಮಾಡಲು ಸಹಕರಿಸಬೇಕು ಎಂದು ಸಲಹೆ ನೀಡಿದ್ದಾರೆ.</p>.<p>‘ಸಂಚಾರ ಪೊಲೀಸರಿಂದ ಪತ್ರ ಬಂದಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಚಾಲಕರ ಸಂಬಳದಿಂದ ಕಡಿತ ಮಾಡಿ ದಂಡ ಪಾವತಿಸುವುದು ಮೊದಲಿನಿಂದ ನಡೆದಿದೆ. ಸಂಚಾರ ಪೊಲೀಸರಿಗೆ ಬಾಕಿ ಮೊತ್ತ ಪಾವತಿಸಲಾಗುವುದು’ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಅಡ್ಡಾದಿಡ್ಡಿ ಬಸ್ ಚಾಲನೆ ಸಂಬಂಧ ಮೂರು ವರ್ಷದ ಅವಧಿಯಲ್ಲಿ ಬಿಎಂಟಿಸಿಗೆ 26 ಸಾವಿರ ನೋಟಿಸ್ ನೀಡಲಾಗಿತ್ತು. ಅದರ ದಂಡದ ಮೊತ್ತ ಪಾವತಿಸುವಂತೆ ಸೂಚಿಸಿ ಬಿಎಂಟಿಸಿಗೆ ಪತ್ರ ಬರೆಯಲಾಗಿದೆ’ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ವಿಶೇಷ ಕಮಿಷನರ್ ಡಾ.ಎಂ.ಎ.ಸಲೀಂ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಪಾವತಿಸಬೇಕಿರುವ ₹1.40 ಕೋಟಿಗೂ ಹೆಚ್ಚು ದಂಡದ ಮೊತ್ತವನ್ನು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಾಕಿ ಉಳಿಸಿಕೊಂಡಿವೆ. ಈ ಮೊತ್ತ ಪಾವತಿಸುವಂತೆ ಎರಡು ಸಂಸ್ಥೆಗಳಿಗೆ ಸಂಚಾರ ಪೊಲೀಸರು ಪತ್ರ ಬರೆದಿದ್ದಾರೆ.</p>.<p>ಸಂಚಾರ ವಿಭಾಗದ ವಿಶೇಷ ಕಮಿಷನರ್ ಡಾ.ಎಂ.ಎ.ಸಲೀಂ ಅವರು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.</p>.<p>ಬಸ್ ಚಾಲಕರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅದರಲ್ಲೂ ಬಿಎಂಟಿಸಿ ಚಾಲಕರು ಎಲ್ಲೆಂದಲ್ಲಿ ಬಸ್ಗಳನ್ನು ನಿಲ್ಲಿಸುವುದು ದಟ್ಟಣೆಗೆ ಕಾರಣವಾಗುತ್ತಿದೆ. ದಂಡ ವಿಧಿಸುತ್ತಿದ್ದರೂ ಈ ಪ್ರವೃತ್ತಿ ಕಡಿಮೆಯಾಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಬಿಎಂಟಿಸಿ ಒಂದರಿಂದಲೇ ₹1.30 ಕೋಟಿಗೂ ಹೆಚ್ಚು ದಂಡ ಬರಬೇಕಿದೆ. ಚಾಲಕರಿಗೆ ಎಚ್ಚರಿಕೆ ನೀಡಿ ದಟ್ಟಣೆ ಕಡಿಮೆ ಮಾಡಲು ಸಹಕರಿಸಬೇಕು ಎಂದು ಸಲಹೆ ನೀಡಿದ್ದಾರೆ.</p>.<p>‘ಸಂಚಾರ ಪೊಲೀಸರಿಂದ ಪತ್ರ ಬಂದಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಚಾಲಕರ ಸಂಬಳದಿಂದ ಕಡಿತ ಮಾಡಿ ದಂಡ ಪಾವತಿಸುವುದು ಮೊದಲಿನಿಂದ ನಡೆದಿದೆ. ಸಂಚಾರ ಪೊಲೀಸರಿಗೆ ಬಾಕಿ ಮೊತ್ತ ಪಾವತಿಸಲಾಗುವುದು’ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಅಡ್ಡಾದಿಡ್ಡಿ ಬಸ್ ಚಾಲನೆ ಸಂಬಂಧ ಮೂರು ವರ್ಷದ ಅವಧಿಯಲ್ಲಿ ಬಿಎಂಟಿಸಿಗೆ 26 ಸಾವಿರ ನೋಟಿಸ್ ನೀಡಲಾಗಿತ್ತು. ಅದರ ದಂಡದ ಮೊತ್ತ ಪಾವತಿಸುವಂತೆ ಸೂಚಿಸಿ ಬಿಎಂಟಿಸಿಗೆ ಪತ್ರ ಬರೆಯಲಾಗಿದೆ’ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ವಿಶೇಷ ಕಮಿಷನರ್ ಡಾ.ಎಂ.ಎ.ಸಲೀಂ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>