<p><strong>ಬೆಂಗಳೂರು</strong>: ಕೋಲಾರದಿಂದ ನಗರಕ್ಕೆ ಗಾಂಜಾ ಸಾಗಿಸುತ್ತಿದ್ದ ಆರೋಪದಡಿ ಆರ್. ಪ್ರದೀಪ್ ಕುಮಾರ್ (36) ಎಂಬುವರನ್ನು ಎಸ್.ಜೆ. ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರೋಪಿ ಪ್ರದೀಪ್, ‘ಬೆಂಗಳೂರು ಟ್ರಾನ್ಪೋರ್ಟ್ ಸಲ್ಯೂಷನ್ಸ್ (ಬಿಟಿಎಸ್)’ ಹೆಸರಿನ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ಅವರ ಬಳಿ 25 ಕಾರುಗಳಿದ್ದವು. ಅದೇ ಕಾರುಗಳಲ್ಲಿ ಆರೋಪಿ ಡ್ರಗ್ಸ್ ಸಾಗಣೆ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಕೃತ್ಯದ ಬಗ್ಗೆ ಮಾಹಿತಿ ಬಂದಿತ್ತು. ಠಾಣೆ ವ್ಯಾಪ್ತಿಯ ಎನ್.ಎಂ. ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ ಗಾಂಜಾ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಅವರಿಂದ ₹ 30 ಲಕ್ಷ ಮೌಲ್ಯದ ಗಾಂಜಾ, ಕಾರು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.</p>.<p>‘ಕೋಲಾರ ನಿವಾಸಿ ಎನ್ನಲಾದ ಸಲೀಂ ಎಂಬುವರನ್ನು ಪರಿಚಯ ಮಾಡಿಕೊಂಡಿದ್ದ ಪ್ರದೀಪ್, ಅವರ ಮೂಲಕ ಗಾಂಜಾ ಖರೀದಿ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ಅದೇ ಗಾಂಜಾವನ್ನು ತಮ್ಮ ಕಾರಿನಲ್ಲಿ ಬೆಂಗಳೂರಿಗೆ ತಂದು, ಉಪ ಪೆಡ್ಲರ್ಗಳ ಮೂಲಕ ಮಾರಾಟ ಮಾಡಿಸುತ್ತಿದ್ದರು.’</p>.<p>‘ಪರಿಚಯಸ್ಥರು ಹಾಗೂ ಸ್ನೇಹಿತರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಸಂಗತಿ ತನಿಖೆಯಿಂದ ಬಯಲಾಗಿದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋಲಾರದಿಂದ ನಗರಕ್ಕೆ ಗಾಂಜಾ ಸಾಗಿಸುತ್ತಿದ್ದ ಆರೋಪದಡಿ ಆರ್. ಪ್ರದೀಪ್ ಕುಮಾರ್ (36) ಎಂಬುವರನ್ನು ಎಸ್.ಜೆ. ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರೋಪಿ ಪ್ರದೀಪ್, ‘ಬೆಂಗಳೂರು ಟ್ರಾನ್ಪೋರ್ಟ್ ಸಲ್ಯೂಷನ್ಸ್ (ಬಿಟಿಎಸ್)’ ಹೆಸರಿನ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ಅವರ ಬಳಿ 25 ಕಾರುಗಳಿದ್ದವು. ಅದೇ ಕಾರುಗಳಲ್ಲಿ ಆರೋಪಿ ಡ್ರಗ್ಸ್ ಸಾಗಣೆ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಕೃತ್ಯದ ಬಗ್ಗೆ ಮಾಹಿತಿ ಬಂದಿತ್ತು. ಠಾಣೆ ವ್ಯಾಪ್ತಿಯ ಎನ್.ಎಂ. ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ ಗಾಂಜಾ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಅವರಿಂದ ₹ 30 ಲಕ್ಷ ಮೌಲ್ಯದ ಗಾಂಜಾ, ಕಾರು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.</p>.<p>‘ಕೋಲಾರ ನಿವಾಸಿ ಎನ್ನಲಾದ ಸಲೀಂ ಎಂಬುವರನ್ನು ಪರಿಚಯ ಮಾಡಿಕೊಂಡಿದ್ದ ಪ್ರದೀಪ್, ಅವರ ಮೂಲಕ ಗಾಂಜಾ ಖರೀದಿ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ಅದೇ ಗಾಂಜಾವನ್ನು ತಮ್ಮ ಕಾರಿನಲ್ಲಿ ಬೆಂಗಳೂರಿಗೆ ತಂದು, ಉಪ ಪೆಡ್ಲರ್ಗಳ ಮೂಲಕ ಮಾರಾಟ ಮಾಡಿಸುತ್ತಿದ್ದರು.’</p>.<p>‘ಪರಿಚಯಸ್ಥರು ಹಾಗೂ ಸ್ನೇಹಿತರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಸಂಗತಿ ತನಿಖೆಯಿಂದ ಬಯಲಾಗಿದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>