ಬೆಂಗಳೂರು: ಕೆಂಗೇರಿ ಬಳಿಯ ರಾಮಸಂದ್ರದಲ್ಲಿರುವ ಸುಗಂಧ ದ್ರವ್ಯ ತಯಾರಿಕೆ ಕಾರ್ಖಾನೆಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಸುಗಂಧ ದ್ರವ್ಯ ತಯಾರಿಸಲು ರಾಸಾಯನಿಕ ಬಳಸಲಾಗುತ್ತಿತ್ತು. ಇದೇ ರಾಸಾಯನಿಕವನ್ನು ಡಬ್ಬಿಗಳಲ್ಲಿ ತುಂಬಿಡಲಾಗಿತ್ತು. ಭಾನುವಾರ ರಾಸಾಯನಿಕ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.