<p><strong>ಬೆಂಗಳೂರು</strong>: ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಬಳಿಯಿದ್ದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು 7 ವರ್ಷದ ಬಳಿಕ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. </p>.<p>ಉತ್ತರಾಖಂಡದ ಚಾವ್ಲಾ ಭವನ್ ನಿವಾಸಿ ಜಿತೇಂದ್ರ ಕುಮಾರ್ ಚಾವ್ಲಾ (37) ಬಂಧಿತ. ಈತನಿಂದ ₹22.75 ಲಕ್ಷ ಮೌಲ್ಯದ 281 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.</p>.<p>ಈತನ ಬಂಧನದಿಂದ 4 ಕಳ್ಳತನ ಪ್ರಕರಣ ಪತ್ತೆಯಾಗಿದೆ. ಈತ ವಾಹನಗಳ ಡೀಲರ್ ಆಗಿದ್ದು, ರೈಲಿನಲ್ಲಿ ರಾತ್ರಿ ಪ್ರಯಾಣಿಕರನ್ನು ಗುರಿಯಾಗಿಸಿ ಚಿನ್ನ, ನಗದು ಲಪಟಾಯಿಸುತ್ತಿದ್ದ ಎಂದು ರೈಲ್ವೆ ಎಸ್ಪಿ ಸೌಮ್ಯಾ ಲತಾ ತಿಳಿಸಿದ್ದಾರೆ.</p>.<p>ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (68) ಅವರು 2018ರ ಜೂನ್11ರಂದು ಸಂಜೆ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಗಲಕೋಟೆಯಿಂದ ಅರಸೀಕೆರೆಗೆ ಪ್ರಯಾಣಿಸುತ್ತಿದ್ದರು. ರಾತ್ರಿ ಆಭರಣ, ನಗದು ಕಳುವಾಗಿತ್ತು. ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕನೂ ಇರಲಿಲ್ಲ.</p>.<p>250 ಗ್ರಾಂ ತೂಕದ ಗೌರಿಶಂಕರ ರುದ್ರಾಕ್ಷಿ ಪದಕ ಹೊಂದಿದ ಚಿನ್ನದ ಸರ, ಎರಡು ಚಿನ್ನದ ನಾಗರ ಉಂಗುರಗಳು, ₹1.62 ಲಕ್ಷ ನಗದು ಸೇರಿ ₹ 10.62 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಸ್ವಾಮೀಜಿ ದೂರು ನೀಡಿದ್ದರು. </p>.<p>ಆರೋಪಿ ಪತ್ತೆಗಾಗಿ ಮೈಸೂರು ರೈಲ್ವೆ ಸಿಪಿಐ ಚೇತನ್, ಅರಸೀಕೆರೆ ಪಿಎಸ್ಐ ಮಹೇಶ್, ಎಎಸ್ಐ ಫುಯಾಜ್ ಖಾನ್ ಮತ್ತು ಸಿಬ್ಬಂದಿ ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಈ ತಂಡ ಹಲವು ಮಾಹಿತಿಗಳನ್ನು ಕಲೆ ಹಾಕಿ ಏಳು ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದೆ. </p>.<p>ಆರೋಪಿ ಸಿಕ್ಕಿ ಬಿದ್ದಿದ್ದು: ಪ್ರೀತಮ್ ಕುಲಕರ್ಣಿ ಎಂಬುವವರ ತಂದೆ 2025ರ ಫೆಬ್ರುವರಿ 8ರಂದು ಉಡುಪಿಯಿಂದ ಬೆಂಗಳೂರಿಗೆ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ₹25 ಸಾವಿರ ಹಣ, ಚಿನ್ನಾಭರಣವಿದ್ದ 2 ಬ್ಯಾಗ್ಗಳು ಕಳ್ಳತನವಾಗಿತ್ತು.</p>.<p>ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿ ಬಿದ್ದ. 2018ರಲ್ಲಿ ಕೋಡಿಮಠದ ಸ್ವಾಮೀಜಿ ಅವರ ಆಭರಣ ಲಪಟಾಯಿಸಿದ್ದಾಗಿ ತಿಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಬಳಿಯಿದ್ದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು 7 ವರ್ಷದ ಬಳಿಕ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. </p>.<p>ಉತ್ತರಾಖಂಡದ ಚಾವ್ಲಾ ಭವನ್ ನಿವಾಸಿ ಜಿತೇಂದ್ರ ಕುಮಾರ್ ಚಾವ್ಲಾ (37) ಬಂಧಿತ. ಈತನಿಂದ ₹22.75 ಲಕ್ಷ ಮೌಲ್ಯದ 281 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.</p>.<p>ಈತನ ಬಂಧನದಿಂದ 4 ಕಳ್ಳತನ ಪ್ರಕರಣ ಪತ್ತೆಯಾಗಿದೆ. ಈತ ವಾಹನಗಳ ಡೀಲರ್ ಆಗಿದ್ದು, ರೈಲಿನಲ್ಲಿ ರಾತ್ರಿ ಪ್ರಯಾಣಿಕರನ್ನು ಗುರಿಯಾಗಿಸಿ ಚಿನ್ನ, ನಗದು ಲಪಟಾಯಿಸುತ್ತಿದ್ದ ಎಂದು ರೈಲ್ವೆ ಎಸ್ಪಿ ಸೌಮ್ಯಾ ಲತಾ ತಿಳಿಸಿದ್ದಾರೆ.</p>.<p>ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (68) ಅವರು 2018ರ ಜೂನ್11ರಂದು ಸಂಜೆ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಗಲಕೋಟೆಯಿಂದ ಅರಸೀಕೆರೆಗೆ ಪ್ರಯಾಣಿಸುತ್ತಿದ್ದರು. ರಾತ್ರಿ ಆಭರಣ, ನಗದು ಕಳುವಾಗಿತ್ತು. ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕನೂ ಇರಲಿಲ್ಲ.</p>.<p>250 ಗ್ರಾಂ ತೂಕದ ಗೌರಿಶಂಕರ ರುದ್ರಾಕ್ಷಿ ಪದಕ ಹೊಂದಿದ ಚಿನ್ನದ ಸರ, ಎರಡು ಚಿನ್ನದ ನಾಗರ ಉಂಗುರಗಳು, ₹1.62 ಲಕ್ಷ ನಗದು ಸೇರಿ ₹ 10.62 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಸ್ವಾಮೀಜಿ ದೂರು ನೀಡಿದ್ದರು. </p>.<p>ಆರೋಪಿ ಪತ್ತೆಗಾಗಿ ಮೈಸೂರು ರೈಲ್ವೆ ಸಿಪಿಐ ಚೇತನ್, ಅರಸೀಕೆರೆ ಪಿಎಸ್ಐ ಮಹೇಶ್, ಎಎಸ್ಐ ಫುಯಾಜ್ ಖಾನ್ ಮತ್ತು ಸಿಬ್ಬಂದಿ ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಈ ತಂಡ ಹಲವು ಮಾಹಿತಿಗಳನ್ನು ಕಲೆ ಹಾಕಿ ಏಳು ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದೆ. </p>.<p>ಆರೋಪಿ ಸಿಕ್ಕಿ ಬಿದ್ದಿದ್ದು: ಪ್ರೀತಮ್ ಕುಲಕರ್ಣಿ ಎಂಬುವವರ ತಂದೆ 2025ರ ಫೆಬ್ರುವರಿ 8ರಂದು ಉಡುಪಿಯಿಂದ ಬೆಂಗಳೂರಿಗೆ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ₹25 ಸಾವಿರ ಹಣ, ಚಿನ್ನಾಭರಣವಿದ್ದ 2 ಬ್ಯಾಗ್ಗಳು ಕಳ್ಳತನವಾಗಿತ್ತು.</p>.<p>ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿ ಬಿದ್ದ. 2018ರಲ್ಲಿ ಕೋಡಿಮಠದ ಸ್ವಾಮೀಜಿ ಅವರ ಆಭರಣ ಲಪಟಾಯಿಸಿದ್ದಾಗಿ ತಿಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>