ಬೆಂಗಳೂರು: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರಿನ ಆರ್.ಎಲ್.ಜಾಲಪ್ಪ ಅಕಾಡೆಮಿಯು (ನೆಲಮಂಗಲದಿಂದ 21 ಕಿ.ಮೀ ದೂರ) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಾಮೀಣ ಪ್ರದೇಶದ ಪದವೀಧರ ಯುವಕ–ಯುವತಿಯರಿಗೆ ನಾಲ್ಕು ತಿಂಗಳ ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿದೆ.
ಕೆಎಎಸ್, ಪಿಎಸ್ಐ, ಎಸ್ಡಿಎ, ಎಫ್ಡಿಎ ಪರೀಕ್ಷೆಗೆ ಸೆ.15ರಿಂದ ತರಬೇತಿ ಆರಂಭವಾಗಲಿದೆ. ವೆಬ್ಸೈಟ್: www.rljacademy.inನಲ್ಲಿ ಆಸಕ್ತರು ಸೆ.10ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಲಕ್ಷ್ಮಣ ಕೊಡಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.