<p><strong>ಬೆಂಗಳೂರು</strong>: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ‘ಟ್ರಾನ್ಸ್ ಎಎಕ್ಸ್’ ಶೃಂಗವು ಹೃದಯ ಶಸ್ತ್ರಚಿಕಿತ್ಸೆಗೆ ‘ಟ್ರಾನ್ಸ್ ಆಕ್ಸಿಲರಿ’ ವಿಧಾನದ ಅಳವಡಿಕೆಯ ಮಹತ್ವ ಸಾರಿತು. </p><p>ಇತ್ತೀಚೆಗೆ ನಡೆದ ಈ ಶೃಂಗದಲ್ಲಿ ಕನಿಷ್ಠ ಗಾಯದ ಮೂಲಕ ಹೃದಯ ಶಸ್ತ್ರಚಿಕಿತ್ಸೆ ನಡೆಸುವ ವಿಧಾನದ ಬಗ್ಗೆ ವಿವರಿಸಲಾಯಿತು. 350ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಶೃಂಗದಲ್ಲಿ ಪಾಲ್ಗೊಂಡಿದ್ದರು, ನೂರಕ್ಕೂ ಅಧಿಕ ಮಂದಿ ಆನ್ಲೈನ್ ವೇದಿಕೆ ನೆರವಿನಿಂದ ಭಾಗವಹಿಸಿದ್ದರು.</p><p>‘ಟ್ರಾನ್ಸ್ ಆಕ್ಸಿಲರಿ ವಿಧಾನದಲ್ಲಿ ಕಂಕುಳಿನ ಜಾಗದ ಮೂಲಕ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಎದೆಯ ಮಧ್ಯ ಭಾಗದಲ್ಲಿರುವ ಎಲುಬನ್ನು ಕತ್ತರಿಸದೆ ಶಸ್ತ್ರಚಿಕಿತ್ಸೆ ನಡೆಸಲು ಈ ವಿಧಾನದಿಂದ ಸಾಧ್ಯ’ ಎಂದು ಸಂಸ್ಥೆಯ ವೈದ್ಯಕೀಯ ತಜ್ಞರು ಶೃಂಗದಲ್ಲಿ ವಿವರಿಸಿದರು. </p><p>‘ಈ ವಿಧಾನದ ಶಸ್ತ್ರಚಿಕಿತ್ಸೆಯಲ್ಲಿ ವ್ಯಕ್ತಿ ತ್ವರಿತವಾಗಿ ಚೇತರಿಸಿಕೊಳ್ಳುತ್ತಾನೆ. ನೋವು ಕೂಡ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ’ ಎಂದು ತಿಳಿಸಿದ ಸಂಸ್ಥೆಯ ಡಾ. ರಾಜೇಶ್ ಕಿಶನ್ ರಾವ್, ಸಂಸ್ಥೆಯಲ್ಲಿ ಟ್ರಾನ್ಸ್ ಆಕ್ಸಿಲರಿ ವಿಧಾನದಲ್ಲಿ ನಡೆಸಲಾದ 500ಕ್ಕೂ ಅಧಿಕ ಶಸ್ತ್ರಚಿಕಿತ್ಸೆಯ ಅನುಭವ ಹಂಚಿಕೊಂಡರು. </p>.<p>ಸಂಸ್ಥೆಯ ನಿರ್ದೇಶಕ ಪ್ರೊ.ಕೆ.ಎಸ್. ರವೀಂದ್ರನಾಥ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಇಲಾಖೆ ನಿರ್ದೇಶಕಿ ಡಾ.ಬಿ.ಎಲ್. ಸುಜಾತಾ ರಾಥೋಡ್, ಶೃಂಗದ ಸಂಘಟನಾ ಕಾರ್ಯದರ್ಶಿ ಡಾ. ಶಿಲ್ಪಾ ಸುರೇಶ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ‘ಟ್ರಾನ್ಸ್ ಎಎಕ್ಸ್’ ಶೃಂಗವು ಹೃದಯ ಶಸ್ತ್ರಚಿಕಿತ್ಸೆಗೆ ‘ಟ್ರಾನ್ಸ್ ಆಕ್ಸಿಲರಿ’ ವಿಧಾನದ ಅಳವಡಿಕೆಯ ಮಹತ್ವ ಸಾರಿತು. </p><p>ಇತ್ತೀಚೆಗೆ ನಡೆದ ಈ ಶೃಂಗದಲ್ಲಿ ಕನಿಷ್ಠ ಗಾಯದ ಮೂಲಕ ಹೃದಯ ಶಸ್ತ್ರಚಿಕಿತ್ಸೆ ನಡೆಸುವ ವಿಧಾನದ ಬಗ್ಗೆ ವಿವರಿಸಲಾಯಿತು. 350ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಶೃಂಗದಲ್ಲಿ ಪಾಲ್ಗೊಂಡಿದ್ದರು, ನೂರಕ್ಕೂ ಅಧಿಕ ಮಂದಿ ಆನ್ಲೈನ್ ವೇದಿಕೆ ನೆರವಿನಿಂದ ಭಾಗವಹಿಸಿದ್ದರು.</p><p>‘ಟ್ರಾನ್ಸ್ ಆಕ್ಸಿಲರಿ ವಿಧಾನದಲ್ಲಿ ಕಂಕುಳಿನ ಜಾಗದ ಮೂಲಕ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಎದೆಯ ಮಧ್ಯ ಭಾಗದಲ್ಲಿರುವ ಎಲುಬನ್ನು ಕತ್ತರಿಸದೆ ಶಸ್ತ್ರಚಿಕಿತ್ಸೆ ನಡೆಸಲು ಈ ವಿಧಾನದಿಂದ ಸಾಧ್ಯ’ ಎಂದು ಸಂಸ್ಥೆಯ ವೈದ್ಯಕೀಯ ತಜ್ಞರು ಶೃಂಗದಲ್ಲಿ ವಿವರಿಸಿದರು. </p><p>‘ಈ ವಿಧಾನದ ಶಸ್ತ್ರಚಿಕಿತ್ಸೆಯಲ್ಲಿ ವ್ಯಕ್ತಿ ತ್ವರಿತವಾಗಿ ಚೇತರಿಸಿಕೊಳ್ಳುತ್ತಾನೆ. ನೋವು ಕೂಡ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ’ ಎಂದು ತಿಳಿಸಿದ ಸಂಸ್ಥೆಯ ಡಾ. ರಾಜೇಶ್ ಕಿಶನ್ ರಾವ್, ಸಂಸ್ಥೆಯಲ್ಲಿ ಟ್ರಾನ್ಸ್ ಆಕ್ಸಿಲರಿ ವಿಧಾನದಲ್ಲಿ ನಡೆಸಲಾದ 500ಕ್ಕೂ ಅಧಿಕ ಶಸ್ತ್ರಚಿಕಿತ್ಸೆಯ ಅನುಭವ ಹಂಚಿಕೊಂಡರು. </p>.<p>ಸಂಸ್ಥೆಯ ನಿರ್ದೇಶಕ ಪ್ರೊ.ಕೆ.ಎಸ್. ರವೀಂದ್ರನಾಥ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಇಲಾಖೆ ನಿರ್ದೇಶಕಿ ಡಾ.ಬಿ.ಎಲ್. ಸುಜಾತಾ ರಾಥೋಡ್, ಶೃಂಗದ ಸಂಘಟನಾ ಕಾರ್ಯದರ್ಶಿ ಡಾ. ಶಿಲ್ಪಾ ಸುರೇಶ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>