‘ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಹೆಡ್ ಕಾನ್ಸ್ಟೆಬಲ್ಗಳು, ಸ್ಥಳೀಯ ಅಪರಾಧಿಗಳ ಜೊತೆ ಒಡನಾಟ ಇಟ್ಟುಕೊಂಡಿದ್ದರು. ಅವರ ಆಮಿಷಗಳಿಗೆ ಒಳಗಾಗುತ್ತಿದ್ದರು. ಅಪರಾಧ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿರಲಿಲ್ಲ. ಕೆಲವರು, ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದರು. ಇವೆಲ್ಲ ಅಂಶಗಳನ್ನು ಗಮನಿಸಿ ವರ್ಗಾವಣೆ ಮಾಡಲಾಗಿದೆ’ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.