ಸಹಾಯಕ ಎಂಜಿನಿಯರ್ (ಎಲೆಕ್ಟ್ರಿಕಲ್) ಎಂ.ಸುರೇಶ್ ಅರ್ಜಿ ಸಲ್ಲಿಸಿ, ‘ಕೋವಿಡ್ ಕರ್ತವ್ಯದಲ್ಲಿ ಇರುವ ಕಾರಣ ವರ್ಗಾವಣೆ ಮಾಡಬಾರದು ಎಂದು ಸರ್ಕಾರ ಆದೇಶಿಸಿದೆ. ಆದರೂ, ಮುಖ್ಯಮಂತ್ರಿ ಅನುಮೋದನೆ ಇಲ್ಲದೆ ವರ್ಗಾವಣೆ ಆದೇಶ ಹೊರಡಿಸಲಾಗಿದೆ’ ಎಂದು ವಾದಿಸಿದ್ದಾರೆ.
‘ಐದು ಕಿಲೋ ಮೀಟರ್ ದೂರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೋವಿಡ್ ಕರ್ತವ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.