ಬೆಂಗಳೂರು: ಕೆ.ಪಿ. ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು, ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
‘ಮೃತರನ್ನು ಗೌತಮ್ ಅಲಿಯಾಸ್ ರಮ್ಯಾ ಎಂದು ಗುರುತಿಸಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರವೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಕೆ.ಪಿ. ಅಗ್ರಹಾರ ಠಾಣೆಯ ಪೊಲೀಸರು ಹೇಳಿದರು.
‘ಟೆಂಟ್ ರಸ್ತೆ ಸಮೀಪದ ಮನೆ ಯೊಂದರಲ್ಲಿ ಒಂಟಿಯಾಗಿ ನೆಲೆಸಿದ್ದ ಗೌತಮ್, 8 ತಿಂಗಳ ಹಿಂದಷ್ಟೇ ತೃತೀಯ ಲಿಂಗಿ ರಮ್ಯಾ ಆಗಿ ಬದಲಾ ಗಿದ್ದರು. ಅವರ ಸಂಬಂಧಿಕರ ಬಗ್ಗೆಯೂ ಸದ್ಯಕ್ಕೆ ಮಾಹಿತಿ ಗೊತ್ತಾಗಿಲ್ಲ’ ಎಂದರು.
‘ಶನಿವಾರ ಮನೆಯಿಂದ ದುರ್ವಾ ಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿ ದ್ದರು. ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗಲೇ ವಿಷಯ ಗೊತ್ತಾಗಿದೆ. ಎರಡು ದಿನಗಳ ಹಿಂದೆಯೇ ಅವರು ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಪೊಲೀಸರು ಹೇಳಿದರು.