<p><strong>ಬೆಂಗಳೂರು:</strong> ಕೆ.ಪಿ. ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು, ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.</p>.<p>‘ಮೃತರನ್ನು ಗೌತಮ್ ಅಲಿಯಾಸ್ ರಮ್ಯಾ ಎಂದು ಗುರುತಿಸಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರವೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಕೆ.ಪಿ. ಅಗ್ರಹಾರ ಠಾಣೆಯ ಪೊಲೀಸರು ಹೇಳಿದರು.</p>.<p>‘ಟೆಂಟ್ ರಸ್ತೆ ಸಮೀಪದ ಮನೆ ಯೊಂದರಲ್ಲಿ ಒಂಟಿಯಾಗಿ ನೆಲೆಸಿದ್ದ ಗೌತಮ್, 8 ತಿಂಗಳ ಹಿಂದಷ್ಟೇ ತೃತೀಯ ಲಿಂಗಿ ರಮ್ಯಾ ಆಗಿ ಬದಲಾ ಗಿದ್ದರು. ಅವರ ಸಂಬಂಧಿಕರ ಬಗ್ಗೆಯೂ ಸದ್ಯಕ್ಕೆ ಮಾಹಿತಿ ಗೊತ್ತಾಗಿಲ್ಲ’ ಎಂದರು.</p>.<p>‘ಶನಿವಾರ ಮನೆಯಿಂದ ದುರ್ವಾ ಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿ ದ್ದರು. ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗಲೇ ವಿಷಯ ಗೊತ್ತಾಗಿದೆ. ಎರಡು ದಿನಗಳ ಹಿಂದೆಯೇ ಅವರು ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಪಿ. ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು, ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.</p>.<p>‘ಮೃತರನ್ನು ಗೌತಮ್ ಅಲಿಯಾಸ್ ರಮ್ಯಾ ಎಂದು ಗುರುತಿಸಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರವೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಕೆ.ಪಿ. ಅಗ್ರಹಾರ ಠಾಣೆಯ ಪೊಲೀಸರು ಹೇಳಿದರು.</p>.<p>‘ಟೆಂಟ್ ರಸ್ತೆ ಸಮೀಪದ ಮನೆ ಯೊಂದರಲ್ಲಿ ಒಂಟಿಯಾಗಿ ನೆಲೆಸಿದ್ದ ಗೌತಮ್, 8 ತಿಂಗಳ ಹಿಂದಷ್ಟೇ ತೃತೀಯ ಲಿಂಗಿ ರಮ್ಯಾ ಆಗಿ ಬದಲಾ ಗಿದ್ದರು. ಅವರ ಸಂಬಂಧಿಕರ ಬಗ್ಗೆಯೂ ಸದ್ಯಕ್ಕೆ ಮಾಹಿತಿ ಗೊತ್ತಾಗಿಲ್ಲ’ ಎಂದರು.</p>.<p>‘ಶನಿವಾರ ಮನೆಯಿಂದ ದುರ್ವಾ ಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿ ದ್ದರು. ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗಲೇ ವಿಷಯ ಗೊತ್ತಾಗಿದೆ. ಎರಡು ದಿನಗಳ ಹಿಂದೆಯೇ ಅವರು ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>