<p><strong>ಬೆಂಗಳೂರು</strong>: ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಮಹಿಳೆಯನ್ನು ಅಡ್ಡಗಟ್ಟಿ ಪರ್ಸ್ ಕಿತ್ತುಕೊಂಡು ಸುಲಿಗೆ ಮಾಡಿದ್ದ ಆರೋಪದಡಿ ಇಬ್ಬರು ತೃತೀಯ ಲಿಂಗಿಗಳನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಚನ್ನಸಂದ್ರದ ನಿವಾಸಿ ನಿಧನ್ಯಾ ಅಲಿಯಾಸ್ ಗುಣಶೇಖರ್ (20) ಹಾಗೂ ಪ್ರವೀಣ್ಯಾ (21) ಬಂಧಿತರು. ಘಟನೆ ನಡೆದ ಮೂರು ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ₹ 2,600 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರರಾದ ಸ್ವಾತಿ ಎಂಬುವರು ಬಾಡಿಗೆ ಮನೆ ಹುಡುಕಲೆಂದು ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನ ರಸ್ತೆಯಲ್ಲಿ ಆಗಸ್ಟ್ 30ರ ಮಧ್ಯಾಹ್ನ ಓಡಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಹಣ ನೀಡುವಂತೆ ಒತ್ತಾಯಿಸಿದ್ದರು.’</p>.<p>‘ಹಣ ನೀಡಲೆಂದು ಸ್ವಾತಿ ಅವರು ಪರ್ಸ್ ಹೊರಗೆ ತೆಗೆದಿದ್ದರು. ಅದನ್ನು ಕಸಿದುಕೊಂಡಿದ್ದ ಆರೋಪಿಗಳು, ಅದರಲ್ಲಿದ್ದ ₹3,000 ಸುಲಿಗೆ ಮಾಡಿ ಪರಾರಿಯಾಗಿದ್ದರು. ಮಹಿಳೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಮಹಿಳೆಯನ್ನು ಅಡ್ಡಗಟ್ಟಿ ಪರ್ಸ್ ಕಿತ್ತುಕೊಂಡು ಸುಲಿಗೆ ಮಾಡಿದ್ದ ಆರೋಪದಡಿ ಇಬ್ಬರು ತೃತೀಯ ಲಿಂಗಿಗಳನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಚನ್ನಸಂದ್ರದ ನಿವಾಸಿ ನಿಧನ್ಯಾ ಅಲಿಯಾಸ್ ಗುಣಶೇಖರ್ (20) ಹಾಗೂ ಪ್ರವೀಣ್ಯಾ (21) ಬಂಧಿತರು. ಘಟನೆ ನಡೆದ ಮೂರು ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ₹ 2,600 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರರಾದ ಸ್ವಾತಿ ಎಂಬುವರು ಬಾಡಿಗೆ ಮನೆ ಹುಡುಕಲೆಂದು ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನ ರಸ್ತೆಯಲ್ಲಿ ಆಗಸ್ಟ್ 30ರ ಮಧ್ಯಾಹ್ನ ಓಡಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಹಣ ನೀಡುವಂತೆ ಒತ್ತಾಯಿಸಿದ್ದರು.’</p>.<p>‘ಹಣ ನೀಡಲೆಂದು ಸ್ವಾತಿ ಅವರು ಪರ್ಸ್ ಹೊರಗೆ ತೆಗೆದಿದ್ದರು. ಅದನ್ನು ಕಸಿದುಕೊಂಡಿದ್ದ ಆರೋಪಿಗಳು, ಅದರಲ್ಲಿದ್ದ ₹3,000 ಸುಲಿಗೆ ಮಾಡಿ ಪರಾರಿಯಾಗಿದ್ದರು. ಮಹಿಳೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>