ಬೆಂಗಳೂರು: ಕಸ್ತೂರಿ ನಗರದಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ(ಬೆಂಗಳೂರು ಪೂರ್ವ) ಫೆ. 6ರಂದು ಸಾರಿಗೆ ಅದಾಲತ್ ನಡೆಯಲಿದೆ.
ಇಲಾಖೆಯ ಹಿರಿಯ ಅಧಿಕಾರಿಗಳು ಅದಾಲಾತ್ನಲ್ಲಿ ಭಾಗವಹಿಸಲಿದ್ದು, ಸಾರಿಗೆ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಿದ್ದಾರೆ ಎಂದು ಬೆಂಗಳೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.