<p><strong>ಬೆಂಗಳೂರು</strong>: ‘ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ವಿವಿಧ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆಯು ಸರ್ಕಾರಕ್ಕೆ ಆಗ್ರಹಿಸಿದೆ. </p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ತಕ್ಷಣಕ್ಕೆ ಸಾಧ್ಯವಾಗದಿದ್ದಲ್ಲಿ, ಸರ್ಕಾರಿ ನೌಕರರಿಗೆ ವೇತನ ಆಯೋಗ ನಿಗದಿಪಡಿಸಿರುವ ಸಂಬಳವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜನವರಿ 2020ಕ್ಕೆ ಅನ್ವಯಿಸಿದಂತೆ ಶೇಕಡ 15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣವನ್ನು ಒಂದೇ ಕಂತಿನಲ್ಲಿ ಸಾರಿಗೆ ನೌಕರರಿಗೆ ಪಾವತಿಸಬೇಕು. ನಿಗಮದ ಖಾಸಗೀಕರಣ ನಿಲ್ಲಿಸಬೇಕು. ಈ ಹಿಂದೆ ಮುಷ್ಕರಗಳಲ್ಲಿ ಭಾಗಿಯಾದ ನೌಕರರ ವಿರುದ್ಧದ ಕ್ರಮಗಳನ್ನು ರದ್ದುಗೊಳಿಸಬೇಕು. ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಉಗ್ರ ಹೋರಾಟ ಮತ್ತೆ ಪ್ರಾರಂಭಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ವಿವಿಧ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆಯು ಸರ್ಕಾರಕ್ಕೆ ಆಗ್ರಹಿಸಿದೆ. </p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ತಕ್ಷಣಕ್ಕೆ ಸಾಧ್ಯವಾಗದಿದ್ದಲ್ಲಿ, ಸರ್ಕಾರಿ ನೌಕರರಿಗೆ ವೇತನ ಆಯೋಗ ನಿಗದಿಪಡಿಸಿರುವ ಸಂಬಳವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜನವರಿ 2020ಕ್ಕೆ ಅನ್ವಯಿಸಿದಂತೆ ಶೇಕಡ 15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣವನ್ನು ಒಂದೇ ಕಂತಿನಲ್ಲಿ ಸಾರಿಗೆ ನೌಕರರಿಗೆ ಪಾವತಿಸಬೇಕು. ನಿಗಮದ ಖಾಸಗೀಕರಣ ನಿಲ್ಲಿಸಬೇಕು. ಈ ಹಿಂದೆ ಮುಷ್ಕರಗಳಲ್ಲಿ ಭಾಗಿಯಾದ ನೌಕರರ ವಿರುದ್ಧದ ಕ್ರಮಗಳನ್ನು ರದ್ದುಗೊಳಿಸಬೇಕು. ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಉಗ್ರ ಹೋರಾಟ ಮತ್ತೆ ಪ್ರಾರಂಭಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>