<p><strong>ಬೆಂಗಳೂರು</strong>: ‘ಆಟೊಗಳಲ್ಲಿ ಅಧಿಕ ದರ ವಸೂಲಿ ಮಾಡುತ್ತಿದ್ದರೆ ಕ್ರಮಕೈಗೊಳ್ಳಿ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. </p>.<p>ನಗರದಲ್ಲಿ ಸರ್ಕಾರ ನಿಗದಿತ ದರಕ್ಕಿಂತಲೂ ಹೆಚ್ಚು ವಸೂಲಿ ಮಾಡುತ್ತಿರುವ ಆ್ಯಪ್ ಆಧರಿತ ಆಟೊ, ಬೇರೆ ಮಾದರಿ ಆಟೊ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ರ್ಯಾಪಿಡೊ, ಓಲಾ ಮುಂತಾದ ಆ್ಯಪ್ಗಳಲ್ಲಿ ವಿಪರೀತ ಪ್ರಯಾಣದರ ತೆಗೆದುಕೊಳ್ಳುತ್ತಿರುವ ಬಗ್ಗೆ ಪ್ರಯಾಣಿಕರು ಮೊಬೈಲ್ ಸ್ಕ್ರೀನ್ಶಾಟ್ ಕಳುಹಿಸುತ್ತಿದ್ದಾರೆ. ಈ ರೀತಿ ಹಗಲು ದರೋಡೆ ಮಾಡುವುದು ಅಕ್ಷಮ್ಯ. ಹೆಚ್ಚಿನ ದರ ಬೇಡಿಕೆ ಇಡುವುದು, ಪ್ರಯಾಣಿಕರು ಒಪ್ಪದೇ ಇದ್ದರೆ ಪ್ರಯಾಣ ರದ್ದುಗೊಳಿಸುವುದು ನಡೆದರೆ ಅಂಥ ಆಟೊಗಳ ಪರ್ಮಿಟ್ ರದ್ದು ಮಾಡುವುದರ ಜೊತೆಗೆ ತಪ್ಪಿತಸ್ಥ ಆಟೊ ಚಾಲಕರು/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸೂಚನೆ ನೀಡಿದ್ದಾರೆ.</p>.<p><strong>ಇಂದಿನಿಂದ ಕ್ರಮ: </strong>‘ಆಟೊಗಳಲ್ಲಿ ಅಧಿಕ ದರ ಕುರಿತು ಅಧಿಕೃತವಾಗಿ ದೂರುಗಳು ಬಂದಿಲ್ಲ. ಶನಿವಾರ ಆರ್ಟಿಒಗಳ ಜೊತೆ ಆಂತರಿಕ ಸಭೆ ನಡೆಸಲಾಗುವುದು. ತಪಾಸಣೆ ನಡೆಸಿ ಅಧಿಕ ದರ ವಸೂಲಿ ಕಂಡುಬಂದರೆ ಕ್ರಮಕ್ಕೆ ಸೂಚಿಸಲಾಗುವುದು. ಶನಿವಾರವೇ ಈ ಕಾರ್ಯಾಚರಣೆ ಆರಂಭವಾಗಲಿದೆ’ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆಟೊಗಳಲ್ಲಿ ಅಧಿಕ ದರ ವಸೂಲಿ ಮಾಡುತ್ತಿದ್ದರೆ ಕ್ರಮಕೈಗೊಳ್ಳಿ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. </p>.<p>ನಗರದಲ್ಲಿ ಸರ್ಕಾರ ನಿಗದಿತ ದರಕ್ಕಿಂತಲೂ ಹೆಚ್ಚು ವಸೂಲಿ ಮಾಡುತ್ತಿರುವ ಆ್ಯಪ್ ಆಧರಿತ ಆಟೊ, ಬೇರೆ ಮಾದರಿ ಆಟೊ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ರ್ಯಾಪಿಡೊ, ಓಲಾ ಮುಂತಾದ ಆ್ಯಪ್ಗಳಲ್ಲಿ ವಿಪರೀತ ಪ್ರಯಾಣದರ ತೆಗೆದುಕೊಳ್ಳುತ್ತಿರುವ ಬಗ್ಗೆ ಪ್ರಯಾಣಿಕರು ಮೊಬೈಲ್ ಸ್ಕ್ರೀನ್ಶಾಟ್ ಕಳುಹಿಸುತ್ತಿದ್ದಾರೆ. ಈ ರೀತಿ ಹಗಲು ದರೋಡೆ ಮಾಡುವುದು ಅಕ್ಷಮ್ಯ. ಹೆಚ್ಚಿನ ದರ ಬೇಡಿಕೆ ಇಡುವುದು, ಪ್ರಯಾಣಿಕರು ಒಪ್ಪದೇ ಇದ್ದರೆ ಪ್ರಯಾಣ ರದ್ದುಗೊಳಿಸುವುದು ನಡೆದರೆ ಅಂಥ ಆಟೊಗಳ ಪರ್ಮಿಟ್ ರದ್ದು ಮಾಡುವುದರ ಜೊತೆಗೆ ತಪ್ಪಿತಸ್ಥ ಆಟೊ ಚಾಲಕರು/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸೂಚನೆ ನೀಡಿದ್ದಾರೆ.</p>.<p><strong>ಇಂದಿನಿಂದ ಕ್ರಮ: </strong>‘ಆಟೊಗಳಲ್ಲಿ ಅಧಿಕ ದರ ಕುರಿತು ಅಧಿಕೃತವಾಗಿ ದೂರುಗಳು ಬಂದಿಲ್ಲ. ಶನಿವಾರ ಆರ್ಟಿಒಗಳ ಜೊತೆ ಆಂತರಿಕ ಸಭೆ ನಡೆಸಲಾಗುವುದು. ತಪಾಸಣೆ ನಡೆಸಿ ಅಧಿಕ ದರ ವಸೂಲಿ ಕಂಡುಬಂದರೆ ಕ್ರಮಕ್ಕೆ ಸೂಚಿಸಲಾಗುವುದು. ಶನಿವಾರವೇ ಈ ಕಾರ್ಯಾಚರಣೆ ಆರಂಭವಾಗಲಿದೆ’ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>